ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೀರೂ ಕೈಬಿಟ್ಟಿದ್ದು ತಂಡದ ನಿರ್ಧಾರ

Last Updated 5 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಮೆಲ್ಬರ್ನ್ (ಪಿಟಿಐ): ಆಸ್ಟ್ರೇಲಿಯಾ ವಿರುದ್ಧ ಭಾನುವಾರ ನಡೆದ ತ್ರಿಕೋನ ಏಕದಿನ ಕ್ರಿಕೆಟ್ ಸರಣಿಯ ಮೊದಲ ಪಂದ್ಯದಲಿ ವೀರೇಂದ್ರ ಸೆಹ್ವಾಗ್ ಕಣಕ್ಕಿಳಿಯಲಿಲ್ಲ. ಇದು ಒಮ್ಮೆಲೇ ಎಲ್ಲರ ಅಚ್ಚರಿಗೆ ಕಾರಣವಾಯಿತು.

ಈ ಸಂಬಂಧ ಪ್ರತಿಕ್ರಿಯೆ ನೀಡಿದ ಭಾರತ ತಂಡದ ನಾಯಕ ಮಹೇಂದ್ರ ಸಿಂಗ್ ದೋನಿ, `ಇದು ತಂಡದ ನಿರ್ಧಾರ. ರೋಹಿತ್ ಶರ್ಮ ಅವರಿಗೆ ಅವಕಾಶ ಮಾಡಿಕೊಡುವ ಹಿನ್ನೆಲೆಯಲ್ಲಿ ತೆಗೆದುಕೊಂಡ ನಿರ್ಧಾರವಿದು~ ಎಂದರು.

`ಆದರೆ ಕಳಪೆ ಬೌಲಿಂಗ್ ಪ್ರದರ್ಶನದಿಂದಾಗಿ ಈ ಪಂದ್ಯ ಸೋಲಬೇಕಾಯಿತು. ಹಾಗೇ ಬ್ಯಾಟಿಂಗ್‌ನಲ್ಲಿ ಉತ್ತಮ ಆರಂಭ ಸಿಗಲಿಲ್ಲ~ ಎಂದು ಅವರು ನುಡಿದರು. ಸರಣಿಯಲ್ಲಿ ಶುಭಾರಂಭ ಮಾಡಿದ್ದಕ್ಕೆ ಆಸ್ಟ್ರೇಲಿಯಾ ತಂಡದ ನಾಯಕ ಮೈಕಲ್ ಕ್ಲಾರ್ಕ್ ಖುಷಿ ವ್ಯಕ್ತಪಡಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT