ಕಾರ್ಯಕ್ರಮದ ಆಯೋಜಕರಲ್ಲಿ ಒಬ್ಬರಾದ ಚಿತ್ರ ಕಲಾವಿದ ದೀಪಕ್ ಶ್ರೀನಿವಾಸನ್, ‘ಈ ಹಿಂದೆ ಜನರು ಮರಗಳನ್ನು ತಮ್ಮ ಕುಟುಂಬದ ಸದಸ್ಯರೆಂಬಂತೆ ಪ್ರೀತಿಸುತ್ತಿದ್ದರು. ಅವುಗಳು ನಮ್ಮದು ಎಂಬ ಭಾವನೆ ಅವರಲ್ಲಿತ್ತು. ಈಗ ಅಂತಹ ಭಾವನೆಗಳೆಲ್ಲಾ ಮರೆಯಾಗಿವೆ. ಮರಗಳೊಂದಿಗೆ ಸಂಬಂಧ ಹೊಂದಿರದ ಅಪಾರ ಸಂಖ್ಯೆಯ ವಲಸಿಗರಿಗೆ ನೆರಳು ಕಾರ್ಯಕ್ರಮದಲ್ಲಿ ವೃಕ್ಷಗಳ ಬಗ್ಗೆ ಅರಿವು ಮೂಡಿಸಲಾಗುವುದು ’ ಎನ್ನುತ್ತಾರೆ. ಕಬ್ಬನ್ ಉದ್ಯಾನದಲ್ಲಿ ಫೆ. 8, 9ರಂದು ನಡೆಯಲಿರುವ ನೆರಳು ವೃಕ್ಷ ಮಹೋತ್ಸದಲ್ಲಿ ಭಾಗವಹಿಸಲು ಈಗಾಗಲೆ 80ಕ್ಕೂ ಹೆಚ್ಚು ಮಂದಿ ಆಸಕ್ತಿ ತೋರಿಸಿದ್ದಾರೆ.