ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃತ್ತಿ ಭದ್ರತೆ ಇಲ್ಲ

Last Updated 22 ಅಕ್ಟೋಬರ್ 2011, 19:30 IST
ಅಕ್ಷರ ಗಾತ್ರ

ಬೆಂಗಳೂರು: `ಮನೋವೈದ್ಯರಿಗೆ ವೃತ್ತಿ ಭದ್ರತೆ ಒದಗಿಸಲು ಕಾಯ್ದೆ ತರಬೇಕೆಂದು ಅಂದಿನ ಕೇಂದ್ರ ಆರೋಗ್ಯ ಸಚಿವ ಅನ್ಬುಮಣಿ ರಾಮದಾಸ್ ಅವರಲ್ಲಿ ಮನವಿ ಮಾಡಿದ್ದೆ. ಆದರೆ ಅದು ಜಾರಿಯಾಗಿಲ್ಲ~ ಎಂದು ರಾಜ್ಯಪಾಲ ಎಚ್.ಆರ್.ಭಾರದ್ವಾಜ್ ವಿಷಾದಿಸಿದರು.

ಕಡಬಮ್ಸ ಸಮೂಹ ಸಂಸ್ಥೆ ನಗರದಲ್ಲಿ ಶನಿವಾರ ಹಮ್ಮಿಕೊಂಡಿದ್ದ `ಅನ್ವೇಷ- 2011~ ಸ್ಪರ್ಧೆ ಸಮಾರೋಪದಲ್ಲಿ  ಮಾತನಾಡಿದರು.

`ಚಿಕಿತ್ಸೆಗಳು ವಾಣಿಜ್ಯೀಕರಣವಾಗಿರುವ ಈ ದಿನಗಳಲ್ಲಿ ಸಂಸ್ಥೆಯು ಮಾನಸಿಕ ಅಸ್ವಸ್ಥರಿಗೆ ಚಿಕಿತ್ಸೆಯೊಂದಿಗೆ ಸಾಮಾಜಿಕ ಭದ್ರತೆ ಒದಗಿಸುತ್ತಿರುವುದು ಶ್ಲಾಘನೀಯ~ ಎಂದರು. ಸಚಿವೆ ಶೋಭಾ ಕರಂದ್ಲಾಜೆ ಮಾತನಾಡಿ, `ಮಾನಸಿಕ ಅಸ್ವಸ್ಥರಿಗಾಗಿ ಸಾರ್ವಜನಿಕ ಮತ್ತು ಖಾಸಗಿ ಪಾಲುದಾರಿಕೆಯಲ್ಲಿ ಉತ್ತಮ ಆಸ್ಪತ್ರೆಗಳು ನಿರ್ಮಾಣಗೊಳ್ಳಬೆಕಿದೆ~ ಎಂದರು.

ಡಾ.ಆನಂದ ಪಾಂಡುರಂಗಿ ಮತ್ತು ಡಾ.ಎಂ.ರಂಗನಾಥನ್ ಅವರಿಗೆ ಮಾನಸಿಕ ಆರೋಗ್ಯ ವೃತ್ತಿ ಪ್ರಶಸ್ತಿ ನೀಡಲಾಯಿತು. ಮಾನಸಿಕ ಅಸ್ವಸ್ಥರ ಪ್ರತಿಭಾ ಅನ್ವೇಷ ಸ್ಪರ್ಧೆಯಲ್ಲಿ ಶಿವಮೊಗ್ಗದ `ಮಾನಸಧಾರಾ~ ಮಾನಸಿಕ ಅಸ್ವಸ್ಥರ ಪುನರ್ವಸತಿ ಕೇಂದ್ರವು ಪ್ರಥಮ ಪ್ರಶಸ್ತಿ ಪಡೆದುಕೊಂಡಿತು. ಡಾ.ಪಿ.ಸತೀಶ್ ಚಂದ್ರ ಸ್ಮರಣ ಸಂಚಿಕೆಯನ್ನು ಬಿಡುಗಡೆ ಮಾಡಿದರು. ಸಮೂಹ ಸಂಸ್ಥೆಯ ಅಧ್ಯಕ್ಷ ರಮೇಶ್ ಕಡಬಮ್ ಇತರರು ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT