ಬೆಂಗಳೂರು: ವೃತ್ತಿಪರ ಕೋರ್ಸ್ಗಳ ಪ್ರವೇಶ ಶುಲ್ಕ ನಿಗದಿ ಮತ್ತು ಮೇಲ್ವಿಚಾರಣಾ ಸಮಿತಿಗಳು ವರದಿ ನೀಡಿದ ನಂತರವೇ ಮುಂದಿನ ಪ್ರಕ್ರಿಯೆಗಳಿಗೆ ಚಾಲನೆ ನೀಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದರು.
ಮಂಗಳವಾರ ಗೃಹ ಕಚೇರಿ ‘ಕೃಷ್ಣಾ’ದಲ್ಲಿ ನಡೆದ ಜನತಾದರ್ಶನ ಸಂದರ್ಭದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಈ ಸಮಿತಿಗಳು ಇದುವರೆಗೆ ವರದಿ ನೀಡದಿದ್ದರೂ ಅನಗತ್ಯ ಗೊಂದಲ ಸೃಷ್ಟಿಸಲಾಗಿದೆ. ಕೇವಲ ಊಹಾಪೋಹಗಳ ಆಧಾರದ ಮೇಲೆ ಶುಲ್ಕ ಮತ್ತು ಪ್ರವೇಶಾತಿ ಕುರಿತು ಚರ್ಚಿಸಲಾಗುತ್ತಿದೆ. ಈ ಎರಡೂ ಸಮಿತಿಗಳಿಗೆ ಹೈಕೋರ್ಟ್ನ ನಿವೃತ್ತ ನ್ಯಾಯಮೂರ್ತಿಗಳನ್ನು ನೇಮಿ ಸಲಾಗಿದೆ. ಈ ಸಮಿತಿಗಳಿಂದ ವರದಿ ಪಡೆದ ನಂತರ ಚರ್ಚೆ ನಡೆಸಿ ಕಾನೂನು ಪ್ರಕಾರ ಮುಂದಿನ ಕ್ರಮ ಜರುಗಿಸ ಲಾಗುವುದು. ಆದ್ದರಿಂದ ತಕ್ಷಣಕ್ಕೆ ಯಾವುದೇ ರೀತಿ ತೀರ್ಮಾನಕ್ಕೂ ಬರಬಾರದು ಎಂದು ತಿಳಿಸಿದರು.
ಇನ್ನೊಂದು ಸುದ್ದಿ
* ಗ್ರಾಮೀಣ ವಿದ್ಯಾರ್ಥಿಗಳಿಗೆ ಮಾರಕ