ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೃದ್ಧಾಪ್ಯ ವೇತನಕ್ಕೆ ಆಗ್ರಹಿಸಿ ಪ್ರತಿಭಟನೆ

Last Updated 1 ಅಕ್ಟೋಬರ್ 2012, 18:30 IST
ಅಕ್ಷರ ಗಾತ್ರ

ಬೆಂಗಳೂರು: ವೃದ್ಧಾಪ್ಯ ವೇತನ ಹೆಚ್ಚಳ, ವೃದ್ಧಾಪ್ಯ ವೇತನ ಪಡೆಯಲು ಅರ್ಹತೆಯ ವಯೋಮಿತಿ ಇಳಿಕೆ ಮತ್ತಿತರ ಬೇಡಿಕೆಗಳಿಗೆ ಒತ್ತಾಯಿಸಿ ಅಖಿಲ ಕರ್ನಾಟಕ ವಯೋವೃದ್ಧರ ಒಕ್ಕೂಟದ ಸದಸ್ಯರು ನಗರದ ಸ್ವಾತಂತ್ರ ಉದ್ಯಾನದಲ್ಲಿ ಸೋಮವಾರ ಪ್ರತಿಭಟನೆ ನಡೆಸಿದರು.

ಪ್ರತಿಭಟನೆಯಲ್ಲಿ ಮಾತನಾಡಿದ ಒಕ್ಕೂಟದ ಅಧ್ಯಕ್ಷೆ ಲತಮ್ಮ, `ರಾಜ್ಯ ಸರ್ಕಾರ ವೃದ್ಧರಿಗೆ ಸದ್ಯ ಮಾಸಿಕವಾಗಿ 400 ರೂಪಾಯಿ ವೃದ್ಧಾಪ್ಯ ವೇತನ ನೀಡುತ್ತಿದೆ. ಇದರಿಂದ ವೃದ್ಧರು ಜೀವನ ನಿರ್ವಹಣೆ ಮಾಡುವುದು ಕಷ್ಟವಾಗಿದೆ. ಆದ್ದರಿಂದ ವೃದ್ಧಾಪ್ಯ ವೇತನವನ್ನು ಸರ್ಕಾರ ಎರಡು ಸಾವಿರ ರೂಪಾಯಿಗಳಿಗೆ ಹೆಚ್ಚಿಸಬೇಕು~ ಎಂದು ಒತ್ತಾಯಿಸಿದರು.

`ವೃದ್ಧಾಪ್ಯ ವೇತನ ಪಡಯುವ ವಯೋಮಿತಿಯನ್ನು ಈಗ 65 ವರ್ಷಕ್ಕೆ ನಿಗದಿಗೊಳಿಸಲಾಗಿದೆ. ಈ ಮಿತಿಯನ್ನು 60 ವರ್ಷಕ್ಕೆ ಇಳಿಸಬೇಕು. ಹಿರಿಯ ನಾಗರಿಕರಿಗಾಗಿ ಸರ್ಕಾರ ಪ್ರತ್ಯೇಕ ಸಚಿವಾಲಯ ಸ್ಥಾಪಿಸಬೇಕು~ ಎಂದರು.

`ಅನರ್ಹರು ಎಂಬ ಕಾರಣ ನೀಡಿ ರಾಜ್ಯದ ಸುಮಾರು ಎಂಟು ಲಕ್ಷ ವೃದ್ಧರನ್ನು ಪಿಂಚಣಿ ವ್ಯಾಪ್ತಿಯಿಂದ ಕೈಬಿಡಲಾಗಿದೆ. ಈ ಬಗ್ಗೆ ಸಮಗ್ರ ಸಮೀಕ್ಷೆ ನಡೆಸಿ ಪಟ್ಟಿಯಿಂದ ಕೈಬಿಟ್ಟವರನ್ನು ಪಿಂಚಣಿ ವ್ಯಾಪ್ತಿಗೆ ಸೇರಿಸಬೇಕು~ ಎಂದು ಅವರು ಆಗ್ರಹಿಸಿದರು.

`ಪಿಂಚಣಿ ಪಡೆಯುವುದು ಹಿರಿಯ ನಾಗರಿಕರ ಹಕ್ಕು ಎಂದು ಸರ್ಕಾರ ಘೋಷಿಸಬೇಕು. ರಾಜ್ಯ ಸಾರಿಗೆ ಸಂಸ್ಥೆಯ ಬಸ್‌ಗಳಲ್ಲಿ ಹಿರಿಯ ನಾಗರಿಕರಿಗೆ ಶೇ 50ರಷ್ಟು ರಿಯಾಯಿತಿ ನೀಡಬೇಕು~ ಎಂದು ಅವರು ಒತ್ತಾಯಿಸಿದರು.

ಪ್ರತಿಭಟನಾ ಸ್ಥಳಕ್ಕೆ ಭೇಟಿ ನೀಡಿದ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವ ಅರವಿಂದ ಲಿಂಬಾವಳಿ, `ಹಿರಿಯ ನಾಗರಿಕರ ಬೇಡಿಕೆಗಳ ಈಡೇರಿಕೆಗೆ ಇಲಾಖೆಯ ಅಧಿಕಾರಿಗಳೊಂದಿಗೆ ಚರ್ಚಿಸಿ ಕ್ರಮ ಕೈಗೊಳ್ಳಲಾಗುವುದು. ಡಿಸೆಂಬರ್ ವೇಳೆಗೆ ವೃದ್ಧಾಪ್ಯ ವೇತನದ ಫಲಾನುಭವಿಗಳ ಪಟ್ಟಿಯನ್ನು ಪರಿಷ್ಕರಿಸಲಾಗುವುದು~ ಎಂದು ಭರವಸೆ ನೀಡಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT