ರಾಣೆಬೆನ್ನೂರು: ಕರ್ನಾಟಕ ರಾಜ್ಯ ಸರ್ಕಾರಿ ಇಲಾಖೆಯ ಗ್ರಾಮ ಸಹಾಯಕರ ಸಂಘದ ಪದಾಧಿಕಾರಿಗಳು ಮತ್ತು ಸದಸ್ಯರು ಗ್ರಾಮ ಸಹಾಯಕರ ಹುದ್ದೆಯನ್ನು ‘ಡಿ‘ ದರ್ಜೆ ನೌಕರರೆಂದು ಪರಿಗಣಿಸಿ ವೇತನ ಪರಿಷ್ಕರಣೆ ಮಾಡಬೇಕು ಎಂದು ಒತ್ತಾಯಿಸಿ ಸೋಮವಾರ ಪ್ರತಿಭಟನೆ ನಡೆಸಿ ಉಪತಹಶೀಲ್ದಾರ್ ಅವರಿಗೆ ಮನವಿ ಸಲ್ಲಿಸಿದರು.
ಗ್ರಾಮ ಸಹಾಯಕರನ್ನು ‘ಡಿ’ ದರ್ಜೆ ನೌಕರರೆಂದು ಪರಿಗಣಿಸಿ ₨ 9,600 ರಿಂದ ₨14,550 ವೇತನ ನಿಗದಿಪಡಿಸಬೇಕು. ನಿವೃತ್ತಿ ಹೊಂದಿದವರಿಗೆ ರೂ 1ಲಕ್ಷ ವರೆಗೆ ಪರಿಹಾರ ಧನ ನೀಡಬೇಕು. ಅಲ್ಲದೆ ಪ್ರತಿ ತಿಂಗಳು ಪಿಂಚಣಿ ನೀಡಬೇಕು ಎಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಗ್ರಾಮ ಸಹಾಯಕ ನಿಂಗಪ್ಪ ಅಂಕಸಾಪುರ ಮಾತನಾಡಿದರು. ಶಫೀ ಪಠಾಣ, ಹನುಮಂತಪ್ಪ ಓಲೇಕಾರ, ಗಜೇಂದ್ರ ದೊಡ್ಡಮನಿ, ನಿಂಗಪ್ಪ ಸೇರಿದಂತೆ ನೂರಾರು ಗ್ರಾಮ ಸಹಾಯಕರು ಉಪಸ್ಥಿರಿದ್ದರು.