ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನ ಬಿಡುಗಡೆಗೆ ಆಗ್ರಹಿಸಿ ಮಹಿಳಾ ಕಾರ್ಮಿಕರ ಪ್ರತಿಭಟನೆ

Last Updated 26 ಫೆಬ್ರುವರಿ 2012, 19:15 IST
ಅಕ್ಷರ ಗಾತ್ರ

ಕೃಷ್ಣರಾಜಪುರ: ವೇತನ ಬಿಡುಗಡೆಗೆ ಒತ್ತಾಯಿಸಿ ಭಟ್ಟರಹಳ್ಳಿ ಸಮೀಪದ ಗಾರ್ಮೆಂಟ್ ಕಾರ್ಖಾನೆಯೊಂದರ ಮಹಿಳಾ ಕಾರ್ಮಿಕರು ಜನವಾದಿ ಮಹಿಳಾ ಸಂಘಟನೆಯ ರಾಜ್ಯ ಘಟಕದ ಅಧ್ಯಕ್ಷೆ ಗೌರಮ್ಮ ಅವರ ನೇತೃತ್ವದಲ್ಲಿ ಇಲ್ಲಿನ ಪೊಲೀಸ್ ಠಾಣೆ ಮುಂದೆ ಪ್ರತಿಭಟನೆ ನಡೆಸಿದರು.

ಈ ಸಂದರ್ಭದಲ್ಲಿ ಮಾತನಾಡಿದ ಗೌರಮ್ಮ, `ಎರಡು ತಿಂಗಳಿನಿಂದ ಮಾಲೀಕರು ಸಂಬಳ ವಿತರಿಸದೇ ಇರುವುದರಿಂದ ಬದುಕು ಸಾಗಿಸಲು ಬಹಳ ಕಷ್ಟವಾಗಿದೆ.

ಮಾಲೀಕರ ವಿರುದ್ಧ ದೂರು ನೀಡಿದ್ದು, ಪೊಲೀಸರು ಅವರನ್ನು ಬಂಧಿಸಿದ್ದರು. ಆದರೆ ಮಾಲೀಕರು ಚೆಕ್ ನೀಡಿದರೆಂದು ಪೊಲೀಸರು ಅವರನ್ನು ಬಿಡುಗಡೆ ಮಾಡಿದ್ದಾರೆ ಎಂದು ಆರೋಪಸಿದರು.

`ಮಾಲೀಕರು ತಮ್ಮ ತಮ್ಮನ ಹೆಸರಿನಲ್ಲಿ ಚೆಕ್ ಬರೆದು ನೀಡಿದ್ದಾರೆ. ಇದರಿಂದಾಗಿ ನೌಕರರಿಗೆ ಸಂಬಳ ನೀಡಲು ಸಾಧ್ಯವಾಗಿಲ್ಲ~ ಎಂದು ಇದೇ ಸಂದರ್ಭದಲ್ಲಿ ದೂರಿದರು.

`ದುಡಿಮೆಯ ಹಣವನ್ನು ನಂಬಿಕೊಂಡು ನಾವು ಸಂಸಾರ ನಡೆಸಬೇಕಾಗಿದೆ. ಮಕ್ಕಳ ಭವಿಷ್ಯವೂ ಹಣದ ಮೇಲೆ ನಿಂತಿದೆ. ಹಾಗಾಗಿ ನಿತ್ಯದ ಬದುಕು ನಡೆಸಲು ಸಾಧ್ಯವಾಗುತ್ತಿಲ್ಲ~ ಎಂದು ಮಹಿಳಾ ಕಾರ್ಮಿಕರು ಅಳಲು ತೋಡಿಕೊಂಡರು. ಪೊಲೀಸ್ ಇನ್ಸ್‌ಪೆಕ್ಟರ್ ಮಲ್ಲಿಕಾರ್ಜುನ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT