ಮಂಗಳವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಸಂಘದ ಅಧ್ಯಕ್ಷ ಮುದ್ದುಕೃಷ್ಣ, ರೂ.3500 ರಿಂದ ರೂ.7000ಕ್ಕೆ ವೇತನವನ್ನು ಹೆಚ್ಚಿಸಲು ಕಾರಣರಾದ ಮುಖ್ಯಮಂತ್ರಿ ಜಗದೀಶ ಶೆಟ್ಟರ್, ಉಪಮುಖ್ಯಮಂತ್ರಿ ಹಾಗೂ ಕಂದಾಯ ಸಚಿವರೂ ಆದ ಕೆ.ಎಸ್.ಈಶ್ವರಪ್ಪ, ಮುಜರಾಯಿ ಸಚಿವ ಕೋಟ ಶ್ರೀನಿವಾಸ ಪೂಜಾರಿ, ಸಣ್ಣ ಕೈಗಾರಿಕಾ ಸಚಿವ ರಾಜುಗೌಡ ಅವರಿಗೆ ಅಭಿನಂದನೆ ಸಲ್ಲಿಸಿದರು. ಗ್ರಾಮಸಹಾಯಕರಾಗಿ ಕೆಲಸ ಮಾಡುತ್ತಿರುವವರನ್ನು `ಡಿ' ದರ್ಜೆ ನೌಕರರಾಗಿ ಪರಿಗಣಿಸಬೇಕು ಎಂದು ಅವರು ಇದೇ ಸಂದರ್ಭದಲ್ಲಿ ಮನವಿ ಮಾಡಿದರು.