ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೇತನಕ್ಕೆ ಆಗ್ರಹಿಸಿ ಪೌರಕಾರ್ಮಿಕರ ಪ್ರತಿಭಟನೆ

Last Updated 2 ಸೆಪ್ಟೆಂಬರ್ 2013, 19:59 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: `ಏಪ್ರಿಲ್ ತಿಂಗಳಿಂದ ವೇತನ ನೀಡಿಲ್ಲ ಎಂದು ಆರೋಪಿಸಿ ಗುತ್ತಿಗೆ ಪೌರಕಾರ್ಮಿಕರು ಬಿಬಿಎಂಪಿ ವಲಯ ಕಚೇರಿ ಆವರಣದಲ್ಲಿ ಸೋಮವಾರ ಧರಣಿ ನಡೆಸಿದರು.

`ಕೊಟ್ಟಿಗೆಪಾಳ್ಯ ಮತ್ತು ಲಗ್ಗೆರೆ ವಾರ್ಡ್ ವ್ಯಾಪ್ತಿಯಲ್ಲಿ 280 ಗುತ್ತಿಗೆ ಕಾರ್ಮಿಕರು ಕಾರ್ಯನಿರ್ವಹಿಸುತ್ತಿದ್ದು ಏಪ್ರಿಲ್ ತಿಂಗಳಿಂದ ವೇತನ ನೀಡದೆ ಗುತ್ತಿಗೆದಾರರಾದ ಕೋದಂಡಪಾಣಿ ಎಂ.ಗುಂಟಪಲ್ಲಿ ಅವರು ಕಿರುಕುಳ ನೀಡುತ್ತಿದ್ದಾರೆ' ಎಂದು ಕಾರ್ಮಿಕರು ಆಗ್ರಹಿಸಿದರು.

`ಮೂರು ತಿಂಗಳಿಂದ ವೇತನ ನೀಡದ ಕಾರಣ ಮನೆ ಬಾಡಿಗೆ ಕಟ್ಟಲು ಸಾಧ್ಯವಾಗುತ್ತಿಲ್ಲ. ಕೂಡಲೇ ಸಂಬಳ ಪಾವತಿಗೆ ಕ್ರಮ ಕೈಗೊಳ್ಳಬೇಕು' ಎಂದು ಜಂಟಿ ಆಯುಕ್ತ ಭೀಮಪ್ಪ ಅವರಲ್ಲಿ ವಿನಂತಿಸಿದರು.

ಉಪ ಆಯುಕ್ತ ರಮೇಶ್‌ಕುಮಾರ್, `ಗುತ್ತಿಗೆದಾರರಿಗೆ ಈಗಾಗಲೇ 1.60 ಕೋಟಿ ರೂಪಾಯಿ ಬಿಡುಗಡೆ ಮಾಡಿದ್ದು ಮಂಗಳವಾರ ವೇತನವನ್ನು ನೀಡದಿದ್ದರೆ ಗುತ್ತಿಗೆಯನ್ನು ರದ್ದು ಮಾಡಿ ಕಾನೂನು ಕ್ರಮ ಕೈಗೊಳ್ಳಲಾಗುವುದು' ಎಂದರು.

ಪೌರಕಾರ್ಮಿಕರ ಪ್ರತಿಭಟನೆಗೆ ಎಸ್‌ಪಿ ಕಾರ್ಯಕರ್ತರು ಬೆಂಬಲ ಸೂಚಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT