ಶನಿವಾರ, 11 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ವೈಭವದ ಉಳುಮೇಶ್ವರ ಸ್ವಾಮಿ ಬ್ರಹ್ಮರಥೋತ್ಸವ

Last Updated 8 ಫೆಬ್ರುವರಿ 2012, 8:20 IST
ಅಕ್ಷರ ಗಾತ್ರ

ಅರಕಲಗೂಡು : ತಾಲ್ಲೂಕಿನ ಮಲ್ಲಿ ಪಟ್ಟಣದ ಉಳುಮೇಶ್ವರ ಸ್ವಾಮಿ ಬ್ರಹ್ಮ ರಥೋತ್ಸವ ಮಂಗಳವಾರ ವೈಭವದಿಂದ ನೆರವೇರಿತು.

ಅಕ್ಕಪಕ್ಕದ ಗ್ರಾಮಗಳಿಂದ ಬಂದಿದ್ದ ಅಪಾರ ಸಂಖ್ಯೆಯ ಭಕ್ತರು ರಥೋತ್ಸ ವದಲ್ಲಿ ಪಾಲ್ಗೊಂಡು ತೇರು ಎಳೆದರು. ರಥದ ಮೇಲೆ ಬಾಳೆಹಣ್ಣು ದವನ ಎಸೆದು ಸಂಭ್ರಮಿಸಿದರು. ರಥೋತ್ಸವದ ಅಂಗವಾಗಿ ಸೋಮವಾರ ರಾತ್ರಿ ಗಿರಿಜಾ ಕಲ್ಯಾಣ, ಉಯ್ಯಾಲೋತ್ಸವ ನಡೆದವು.

ಮಂಗಳವಾರ ಬೆಳಿಗ್ಗೆ ದೇವಾಲಯ ದಲ್ಲಿನ ಶಿವಲಿಂಗಕ್ಕೆ ಅಭಿಷೇಕ, ಅರ್ಚನೆ ಹಾಗೂ ಮಹಾ ಮಂಗಳಾರತಿ ನಡೆಯಿತು. ಉತ್ಸವದ ನಂತರ ದೇವರ ಮೂರ್ತಿಯನ್ನು ಅಲಂಕರಿಸಿದ ರಥದಲ್ಲಿ ಕೂರಿಸಿ ರಥೋತ್ಸವ ನಡೆಸಲಾಯಿತು. ಬಳಿಕ ವಸಂತ ಸೇವೆ ರಾತ್ರಿ ಶಾಂತೋತ್ಸವಗಳು ನಡೆದವು. ಜಾತ್ರೆಯಲ್ಲಿ ಸಿಹಿ ತಿನಿಸು, ಆಟಿಕೆಗಳು ಅಲಂಕಾರಿಕ ವಸ್ತುಗಳ ಅಂಗಡಿಗಳು ಬೀಡು ಬಿಟ್ಟು ವಹಿವಾಟು ನಡೆಸಿದವು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT