ನಗರದ ಗ್ಯಾರೇಜೊಂದರಲ್ಲಿ ಮೆಕ್ಯಾನಿಕ್ ಆಗಿ ಕೆಲಸ ಮಾಡುವ ಮಾದೇನಹಳ್ಳಿ ಮುಸ್ಲಿಂ ಕಾಲೊನಿಯ ಜಾಫರ್ (30) ಊರಿಗೆ ಮರಳುತ್ತಿದ್ದ ಸಂದರ್ಭದಲ್ಲಿ ಗೌಡನಹಳ್ಳಿ ಅರಣ್ಯ ಪ್ರದೇಶದಲ್ಲಿ ನಾಲ್ವರು ಮುಸುಕುಧಾರಿಗಳು ಇದ್ದಕ್ಕಿದ್ದಂತೆ ಬೈಕಿಗೆ ಅಡ್ಡ ಬಂದು, ಖಾರದ ಪುಡಿಯನ್ನು ಮೈಮೇಲೆ ಎರಚಿ, ರೂ. 8500 ನಗದು ಹಾಗೂ ಮೊಬೈಲ್ ಕಿತ್ತುಕೊಂಡು ಹೋಗಿದ್ದಾರೆ ಎಂದು ಪೊಲೀಸರಿಗೆ ದೂರು ನೀಡಲಾಗಿದೆ. ಆರೋಪಿಗಳ ಸುಳಿವು ಇದುವರೆಗೂ ದೊರೆತಿಲ್ಲ.