ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಬರಿ ಮಲೆ ದುರಂತ: ಮೃತ ಕರ್ನಾಟಕದ ಭಕ್ತರ ಸಂಖ್ಯೆ ಏರಿಕೆ

Last Updated 16 ಜನವರಿ 2011, 19:55 IST
ಅಕ್ಷರ ಗಾತ್ರ

ಹುಬ್ಬಳ್ಳಿ: ಶಬರಿಮಲೆ ಸಮೀಪ ಶುಕ್ರವಾರ ರಾತ್ರಿ ನಡೆದ ರಸ್ತೆ ಅಪಘಾತ ಮತ್ತು ಕಾಲ್ತುಳಿತದಲ್ಲಿ ಸತ್ತವರಲ್ಲಿ ಉತ್ತರ ಕರ್ನಾಟಕದ ಮತ್ತೆ ಐವರು ಸೇರಿದ್ದು, ಸತ್ತವರ ಸಂಖ್ಯೆ 20ಕ್ಕೇರಿದಂತಾಗಿದೆ.

ಬೆಳಗಾವಿ ನಗರದ ಮೂವರು ಸಾವನ್ನಪ್ಪಿರುವುದು ಭಾನುವಾರ ದೃಢಪಟ್ಟಿದೆ. ಇದರಿಂದಾಗಿ ಜಿಲ್ಲೆಯಲ್ಲಿ ಸತ್ತವರ ಸಂಖ್ಯೆ 10ಕ್ಕೆ ಏರಿದೆ. ಭಾರತ ನಗರದ ನಿವಾಸಿಗಳಾದ ಆನಂದ ಮಾರುತಿ ಗೊಲ್ಲರ (18), ನಾಗಪ್ಪ ಅಪ್ಪಯ್ಯ ಇಟಗಿ (21) ಹಾಗೂ ಯಲ್ಲಪ್ಪ ಮಾರುತಿ ಗೊಲ್ಲರ (27) ಎಂಬುವವರೇ ಮೃತಪಟ್ಟಿದ್ದಾರೆ.

ವಿಜಾಪುರ ಜಿಲ್ಲೆಯ ಬೋಳಚಿಕ್ಕಲಕಿ ಗ್ರಾಮದ ಬಸವರಾಜ ಸಂಗಪ್ಪ ಅಂಗಡಿ(32) ಶಬರಿಮಲೆಯಲ್ಲಿ ಕಾಲ್ತುಳಿತಕ್ಕೆ ಈಡಾಗಿ ಕೊನೆಯುಸಿರೆಳೆದಿದ್ದಾರೆ. ಮುಧೋಳ ತಾಲ್ಲೂಕಿನ ಮಂಟೂರಿನ ಶ್ರೀಕಾಂತ ಶ್ರೀಶೈಲ ತಿಮ್ಮಾಪುರ (30) ಕಾಲ್ತುಳಿತಕ್ಕೆ ಬಲಿಯಾಗಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT