ಬೆಂಗಳೂರು: ಶಬ್ದ ಮಾಲಿನ್ಯ ಮಾಡದೆ, ಕಟ್ಟಡ ನಿರ್ಮಾಣ ಕಾಮಗಾರಿ ನಡೆಸಲು ಹೇಗೆ ಸಾಧ್ಯ ಎಂದು ಶೋಭಾ ಬಿಲ್ಡರ್ಸ್ನಿಂದ ಸ್ಪಷ್ಟನೆ ಕೋರಿರುವ ಹೈಕೋರ್ಟ್, ಸಾಯಂಕಾಲ 6 ಗಂಟೆಯ ನಂತರ, ನಿರ್ಮಾಣ ಕಾಮಗಾರಿಗಳನ್ನು ಕೈಗೆತ್ತಿಕೊಳ್ಳಬಾರದು ಎಂಬ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದೆ.
ರಾತ್ರಿ ಸಮಯದಲ್ಲಿ ಕಟ್ಟಡ ನಿರ್ಮಾಣ ಕಾರ್ಯ ಕೈಗೆತ್ತಿಕೊಳ್ಳುವುದನ್ನು ನಿಷೇಧಿಸಿ ಹೊರಡಿಸಿದ್ದ ಆದೇವನ್ನು ರದ್ದು ಮಾಡುವಂತೆ ಕೋರಿ ಶೋಭಾ ಬಿಲ್ಡರ್ಸ್ ಮತ್ತು ಇತರರು ಸಲ್ಲಿಸಿರುವ ಅರ್ಜಿಯ ವಿಚಾರಣೆಯನ್ನು ಮುಖ್ಯ ನ್ಯಾಯಮೂರ್ತಿ ವಿಕ್ರಮಜಿತ್ ಸೇನ್ ಮತ್ತು ನ್ಯಾಯಮೂರ್ತಿ ಬಿ.ವಿ. ನಾಗರತ್ನ ಅವರನ್ನು ಒಳಗೊಂಡ ವಿಭಾಗೀಯ ಪೀಠ ನಡೆಸುತ್ತಿದೆ.