ಬುಧವಾರ, 8 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಲಾ ಬಂದ್ ವಾಪಸ್ ಪಡೆದ ಕುಸ್ಮಾ

Last Updated 18 ಜುಲೈ 2012, 19:55 IST
ಅಕ್ಷರ ಗಾತ್ರ

ಬೆಂಗಳೂರು: ಕಡ್ಡಾಯ ಶಿಕ್ಷಣ ಹಕ್ಕು ಕಾಯ್ದೆಯ (ಆರ್‌ಟಿಇ) ಅನುಷ್ಠಾನದ ಬಗ್ಗೆ ಇರುವ ಗೊಂದಲಗಳನ್ನು ನಿವಾರಿಸಬೇಕೆಂಬುದು ರಾಜ್ಯ ಅನುದಾನ ರಹಿತ ಶಾಲೆಗಳ ಆಡಳಿತ ಮಂಡಳಿಗಳ ಸಂಘ (ಕುಸ್ಮಾ) ಸೋಮವಾರದಿಂದ ನಡೆಸುತ್ತಿದ್ದ ಶಾಲಾ ಬಂದ್ ಅನ್ನು ಬುಧವಾರ ವಾಪಸ್ ಪಡೆಯಿತು.

`ವಿದ್ಯಾರ್ಥಿಗಳಿಗೆ ಅನನುಕೂಲವಾಗಬಾರದೆಂಬ ಉದ್ದೇಶದಿಂದ ಬಂದ್ ಹಿಂಪಡೆಯಲಾಗಿದೆ. ಆದರೆ, ಕಾಯ್ದೆಯ ಬಗ್ಗೆ ಸರ್ಕಾರ ತನ್ನ ನಿಲುವನ್ನು ಸ್ಪಷ್ಟ ಪಡಿಸುವವರೆಗೂ ಹೋರಾಟ ಮುಂದುವರಿಯಲಿದೆ. ಹೋರಾಟದ ರೂಪುರೇಷೆ ಬಗ್ಗೆ ಸದ್ಯದಲ್ಲೇ ಕುಸ್ಮಾ ಸದಸ್ಯರ ಸಭೆ ಕರೆದು ಚರ್ಚಿಸಲಾಗುವುದು. ಸರ್ಕಾರದ ನೀತಿಯನ್ನು ನ್ಯಾಯಾಲಯದಲ್ಲಿ ಪ್ರಶ್ನಿಸಲಾಗುವುದು~ ಎಂದು ಕುಸ್ಮಾ ಕಾರ್ಯದರ್ಶಿ ಎ.ಮರಿಯಪ್ಪ `ಪ್ರಜಾವಾಣಿ~ಗೆ ತಿಳಿಸಿದರು.

ಶರ್ಮ ರಾಜೀನಾಮೆ ಅಂಗೀಕಾರ:  `ತಮ್ಮ ಗೊಂದಲದ ಹೇಳಿಕೆಯ ಬಗ್ಗೆ ಬೇಸರಗೊಂಡು ಕುಸ್ಮಾ ಅಧ್ಯಕ್ಷ ಸ್ಥಾನಕ್ಕೆ ಜಿ.ಎಸ್. ಶರ್ಮ ಮಂಗಳವಾರ ನೀಡಿದ್ದ ರಾಜೀನಾಮೆಯನ್ನು ಬುಧವಾರ ಸಂಘದ ಕಾರ್ಯಕಾರಿ ಸಮಿತಿ ಸದಸ್ಯರ ಮುಂದಿಟ್ಟು ಅಂಗೀಕರಿಸಲಾಗಿದೆ. ಸಂಘದ ಮುಂದಿನ ಅಧ್ಯಕ್ಷರ ಆಯ್ಕೆಯ ಬಗ್ಗೆ ಸದ್ಯದಲ್ಲೇ ಸಭೆ ನಡೆಸಲಾಗುವುದು~ ಎಂದು ಅವರು ಹೇಳಿದರು.

ಶರ್ಮ ವಿರುದ್ಧ ದೂರು : `ಬಡ ಮಕ್ಕಳ ಬಗ್ಗೆ ಅವಹೇಳನಕಾರಿ ಹೇಳಿಕೆ ನೀಡಿರುವ ಕುಸ್ಮಾದ ಮಾಜಿ ಅಧ್ಯಕ್ಷ ಜಿ.ಎಸ್.ಶರ್ಮ ಅವರ ವಿರುದ್ಧ ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಜಾತಿ ನಿಂದನೆ ಕಾಯ್ದೆಯಡಿ ಪ್ರಕರಣ ದಾಖಲಿಸಿಕೊಂಡು, ಅವರನ್ನು ಬಂಧಿಸಬೇಕು~ ಎಂದು ದೇವನಹಳ್ಳಿ ತಾಲ್ಲೂಕಿನ ಚೌಡನಹಳ್ಳಿಯ ದಲಿತ ಮುಖಂಡ ಎಂ.ಲೋಕೇಶ್ ಎಂಬುವರು ದೇವನಹಳ್ಳಿ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದಾರೆ.

`ಪರಿಶಿಷ್ಟ ಜಾತಿ ಮತ್ತು ಪಂಗಡಗಳ ಕಾಯ್ದೆ 1999, ಅನುಬಂಧ 9 ಹಾಗೂ ಭಾರತೀಯ ದಂಡ ಸಂಹಿತೆ 153 ಎ ಕಲಂನ ಅಡಿ ಪ್ರಕರಣ ದಾಖಲಿಸಿಕೊಳ್ಳಲಾಗಿದೆ~ ಎಂದು ದೇವನಹಳ್ಳಿ ಪೊಲೀಸರು ತಿಳಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT