ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಾಸಕ ಕುಮಾರಸ್ವಾಮಿ ವಿರುದ್ಧ ದೂರು

Last Updated 25 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಶಿವಮೊಗ್ಗ: ಶಿಕ್ಷಕಿಯೊಬ್ಬರಿಂದ ಹಣ ಪಡೆದು ನಿವೇಶನ ನೀಡದೆ ವಂಚಿಸಿದ ಆರೋಪಕ್ಕೆ ಸಂಬಂಧಿಸಿದಂತೆ ಇಲ್ಲಿಯ ಸಿಂಡಿಕೇಟ್ ಬ್ಯಾಂಕ್ ಎಂಪ್ಲಾಯ್ಸ ಹೌಸಿಂಗ್ ಕೋ- ಆಪರೇಟಿವ್ ಸೊಸೈಟಿಯ ಉಪಾಧ್ಯಕ್ಷರೂ ಆದ ಶಿವಮೊಗ್ಗ ಗ್ರಾಮಾಂತರ ಕ್ಷೇತ್ರದ ಶಾಸಕ ಕೆ.ಜಿ. ಕುಮಾರಸ್ವಾಮಿ ಸೇರಿದಂತೆ ಮೂವರ ವಿರುದ್ಧ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಯಲ್ಲಿ ಶುಕ್ರವಾರ ಎಫ್‌ಐಆರ್ ದಾಖಲಾಗಿದೆ.

ನಗರದ ವಿನೋಬನಗರ 60 ಅಡಿ ರಸ್ತೆಯ ನಿವಾಸಿ ಶಿಕ್ಷಕಿ ಡಿ. ದಾಕ್ಷಾಯಣಮ್ಮ, ಸಿಂಡಿಕೇಟ್ ಬ್ಯಾಂಕ್ ಎಂಪ್ಲಾಯ್ಸ ಹೌಸಿಂಗ್ ಕೋ-ಆಪರೇಟಿವ್ ಸೊಸೈಟಿ ಅಧ್ಯಕ್ಷ ಶಶಿಕಾಂತ್, ಕಾರ್ಯದರ್ಶಿ ಅಶೋಕ್‌ಕುಮಾರ್ ವಿರುದ್ಧ 2ನೇ ಜೆಎಂಎಫ್ ನ್ಯಾಯಾಲಯದಲ್ಲಿ ಖಾಸಗಿ ದೂರು ಸಲ್ಲಿಸಿದ್ದರು.

ವಿಚಾರಣೆ ನಡೆಸಿದ ನ್ಯಾಯಾಲಯ, ತನಿಖೆ ನಡೆಸಿ ವರದಿ ಸಲ್ಲಿಸುವಂತೆ ನಗರದ ದೊಡ್ಡಪೇಟೆ ಪೊಲೀಸ್ ಠಾಣೆಗೆ ಸೂಚಿಸಿತ್ತು. ಅದರಂತೆ ಈ ಮೂವರ ವಿರುದ್ಧ ಕಾಯ್ದೆ 154ರ ಅಡಿ ಪೊಲೀಸರು ಎಫ್‌ಐಆರ್ ದಾಖಲಿಸಿಕೊಂಡಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT