ಬೆಂಗಳೂರು: ಪ್ರಾಥಮಿಕ ಹಾಗೂ ಪ್ರೌಢಶಾಲಾ ಶಿಕ್ಷಕರಿಗೆ ಪ್ರಸಕ್ತ ವರ್ಷದಿಂದ ಜಾರಿಗೊಳಿಸಿರುವ ಸಮಗ್ರ ಹಾಗೂ ನಿರಂತರ ಮೌಲ್ಯಮಾಪನ (ಸಿಸಿಇ) ವ್ಯವಸ್ಥೆಯನ್ನು ರದ್ದುಗೊಳಿಸಬೇಕು ಎಂದು ವಿಧಾನಪರಿಷತ್ ಸದಸ್ಯರಾದ ಪುಟ್ಟಣ್ಣ ಮತ್ತು ಮರಿತಿಬ್ಬೇಗೌಡ ಬುಧವಾರ ಇಲ್ಲಿ ಆಗ್ರಹಿಸಿದರು.
ಬೋಧನಾ ಕಾರ್ಯಗಳಿಗಿಂತ ಇತರೆ ಕಾರ್ಯಗಳಿಗೆ ಶಿಕ್ಷಕರ ಸಮಯ ಹೆಚ್ಚು ವ್ಯರ್ಥವಾಗುತ್ತಿದೆ. ಈಗಿರುವ ವ್ಯವಸ್ಥೆಯಲ್ಲಿ ಸಿಸಿಇ ಜಾರಿ ಸೂಕ್ತವಾಗಿಲ್ಲ. ಕೇವಲ ದಾಖಲೆಗಳ ನಿರ್ವಹಣೆಯಲ್ಲಿ ಶಿಕ್ಷಕರ ಸಮಯ ಪೋಲಾಗುತ್ತಿದೆ ಎಂದು ಪತ್ರಿಕಾಗೋಷ್ಠಿಯಲ್ಲಿ ತಿಳಿಸಿದರು.