ಕರ್ನಾಟಕ ರಾಜ್ಯ ವಸತಿ ಶಿಕ್ಷಣ ಸಂಸ್ಥೆಗಳ ಸಂಘದ ಅಡಿಯಲ್ಲಿ ಕಾರ್ಯನಿರ್ವಹಿಸುವ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಯನ್ನು ನೇರ ನೇಮಕಾತಿ ಮೂಲಕ ಮಾಡಿಕೊಳ್ಳಲು ಸಂಘ ಮುಂದಾಗಿದೆ.
ಈ ಶಾಲೆಗಳಲ್ಲಿ ಐದಾರು ವರ್ಷಗಳಿಂದ ಹೊರಗುತ್ತಿಗೆ ಆಧಾರದಲ್ಲಿ ಕಾರ್ಯ ನಿರ್ವಹಿಸುತ್ತಿರುವ ಪ್ರಾಂಶುಪಾಲರು ಮತ್ತು ಶಿಕ್ಷಕರು ಮತ್ತಿತರರು ಇದರಿಂದ ಬೀದಿಗೆ ಬರುವಂತಾಗಿದೆ.
ಅವರನ್ನೇ ನಂಬಿಕೊಂಡಿರುವ ಅವರ ಕುಟುಂಬಗಳ ಗತಿ ಏನು? ಈ ಶಾಲೆಗಳನ್ನು ಕಟ್ಟಿ ಬೆಳೆಸಿದವರು ಈ (ನಾವು) ಶಿಕ್ಷಕರೇ.
ಇಷ್ಟು ವರ್ಷಗಳ ಕಾಲ ಅವರನ್ನು ದುಡಿಸಿಕೊಂಡು ಈಗ ಹೊರ ಹಾಕುವುದು ಸರಿಯಲ್ಲ. ಸರ್ಕಾರ ಅವರಿಗೆ ನ್ಯಾಯ ದೊರಕಿಸಿಕೊಡಬೇಕು ಎಂದು ಒತ್ತಾಯಿಸುತ್ತೇವೆ.