ಶುಕ್ರವಾರ, 26 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ ಚಲನಶೀಲವಾಗಿರಲಿ

Last Updated 3 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ಕನಕಪುರ: ಶಿಕ್ಷಕರು ಪ್ರಸ್ತುತ ಸಮಾಕ್ಕೆ ಅಗತ್ಯವಾದ ಶಿಕ್ಷಣವನ್ನು ಮಕ್ಕಳಿಗೆ ನೀಡುವಂತಾಗಬೇಕೆಂದು ಶಿಕ್ಷಣ ತಜ್ಞ ಶ್ಯಾಮಸುಂದರ್ ಶರ್ಮಾ ಹೇಳಿದರು. 

 ಪಟ್ಟಣದ ರೂರಲ್ ಕಾಲೇಜಿನಲ್ಲಿ 2012 ನೇ ಸಾಲಿನ ಬಿ.ಎಡ್ ಪ್ರಶಿಕ್ಷಣಾರ್ಥಿಗಳಿಗೆ ಏರ್ಪಡಿಸಿದ್ದ ಸ್ವಾಗತ ಸಮಾರಂಭದಲ್ಲಿ ಮಾತನಾಡಿದ ಅವರು, ಸಮಾಜದಲ್ಲಿ ಶಿಕ್ಷಕರು ಇತರರರಿಗೆ ಮಾದರಿಯಾಗಿರಬೇಕು. ಸದೃಢ ರಾಷ್ಟ್ರವನ್ನು ಕಟ್ಟುವಂತಹ ಮಕ್ಕಳನ್ನು ತಯಾರು ಮಾಡಬೇಕಿದೆ. ಇಲ್ಲವಾದಲ್ಲಿ ಸಮಾಜ ದುಸ್ಥಿತಿಗೆ ತಲುಪುತ್ತದೆ ಎಂದು ಆತಂಕ ವ್ಯಕ್ತಪಡಿಸಿದರು.

ಅಧ್ಯಕ್ಷತೆ ವಹಿಸಿದ್ದ ಆರ್‌ಇಎಸ್ ಸಂಸ್ಥೆಯ ಅಧ್ಯಕ್ಷ ಕೆ.ಜಿ.ತಿಮ್ಮಪ್ಪ ಮಾತನಾಡಿ, ಶಿಕ್ಷಣಾರ್ಥಿಗಳು ಆದರ್ಶ ಗುಣಗಳನ್ನು ಅಳವಡಿಸಿಕೊಂಡು ಬದುಕಿದಾಗ ಓದಿದ ಸಂಸ್ಥೆಗೆ ಹಾಗೂ ಪಾಠ ಹೇಳಿಕೊಟ್ಟ ಶಿಕ್ಷಕರಿಗೂ ಗೌರವ ದೊರೆಯುತ್ತದೆ ಎಂದರು.

ಉಪಾಧ್ಯಕ್ಷ ಕೆ.ಬಿ.ನಾಗರಾಜು, ಖಜಾಂಚಿ ಎಂ.ನಾಗರಾಜು, ಸದಸ್ಯರಾದ ತಿಮ್ಮಯ್ಯ, ನಾಗೇಗೌಡ, ಪ್ರಾಂಶುಪಾಲ ಎಚ್.ಎಸ್. ಹರೀಶ್ ಇತರರು ಹಾಜರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT