ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿಕ್ಷಣ: ವಿಕಸನದ ದಾರಿಯಾಗಬೇಕು

Last Updated 27 ಜನವರಿ 2012, 19:30 IST
ಅಕ್ಷರ ಗಾತ್ರ

ರಾಜರಾಜೇಶ್ವರಿನಗರ: `ಶಿಕ್ಷಣ ಎಂದರೆ ಕೇವಲ ಓದು ಬರಹಗಳಷ್ಟೇ ಅಲ್ಲ; ಅದು ಒಬ್ಬ ವ್ಯಕ್ತಿಯ ವಿಕಸನದ ದಾರಿಯಾಗಬೇಕು~ ಎಂದು ಕಲಾವಿದ ಬಿ.ಕೆ.ಎಸ್.ವರ್ಮ ಅಭಿಪ್ರಾಯ ಪಟ್ಟರು.

ಕೊಬಾಲ್ಟ್ ಕಲಾ ಸಂಸ್ಥೆಯ 5ನೇ ವಾರ್ಷಿಕೋತ್ಸವ ಅಂಗವಾಗಿ ಹಮ್ಮಿಕೊಂಡಿದ್ದ ಚಿತ್ರಕಲಾ ಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

`ಉತ್ತಮ ವ್ಯಕ್ತಿತ್ವ ರೂಪುಗೊಳ್ಳಲು ಶಿಕ್ಷಣದ ಜತೆ ಕಲೆ ಸಂಸ್ಕೃತಿಗಳೂ ಅವಶ್ಯ~ ಎಂದು ಅವರು ಈಸಂದರ್ಭದಲ್ಲಿ ಹೇಳಿದರು.

ಚಿತ್ರನಟ ರಾಮಕೃಷ್ಣ ಬಹುಮಾನ ವಿತರಿಸಿ ಮಾತನಾಡಿದರು. ಕಾಂಗ್ರೆಸ್‌ನ ರಾಜರಾಜೇಶ್ವರಿನಗರ ಬ್ಲಾಕ್ ಅಧ್ಯಕ್ಷ ಎಂ.ರಾಜಕುಮಾರ್ ಅಧ್ಯಕ್ಷತೆ ವಹಿಸಿದ್ದರು.

ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಅಧಿಕಾರಿ ಎಸ್.ಐ.ಬಾವಿಕಟ್ಟಿ, ಸಂಸ್ಥೆಯ ಸ್ಥಾಪಕ ಗಣಪತಿ ಹೆಗಡೆ ಮೊದಲಾದವರು ಉಪಸ್ಥಿತರಿದ್ದರು. 300ಕ್ಕೂ ಹೆಚ್ಚು ವಿದ್ಯಾರ್ಥಿಗಳು ಚಿತ್ರ ಕಲಾ ಸ್ಪರ್ಧೆಯಲ್ಲಿ ಭಾಗವಹಿಸಿದ್ದರು. ಐದು ಮಕ್ಕಳಿಗೆ ಕೊಬಾಲ್ಟ್ ಪ್ರಶಸ್ತಿ ಗಳನ್ನು ನೀಡಲಾಯಿತು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT