ಬೆಂಗಳೂರು: ಮಂಗಳವಾರ ಬೆಳಿಗ್ಗೆ 8.30ಕ್ಕೆ ಕೊನೆಗೊಂಡಂತೆ ರಾಜ್ಯದ ಒಳನಾಡು ಮತ್ತು ಕರಾವಳಿಯ ಕೆಲವು ಪ್ರದೇಶಗಳಲ್ಲಿ ಮಳೆಯಾಗಿದೆ. ಶಿರಸಿಯಲ್ಲಿ ಗರಿಷ್ಠ 6 ಸೆಂ.ಮೀ ಮಳೆಯಾಗಿದೆ.
ಹಾವೇರಿ 4, ಬ್ಯಾಡಗಿ, ಸವಣೂರು 3, ಬನವಾಸಿ, ಹಾನಗಲ್, ಕಳಸ 2, ಉಡುಪಿ, ಕೋಟ, ತ್ಯಾಗರ್ತಿ, ಆನವಟ್ಟಿ ಮತ್ತು ಶಿರಾಳಕೊಪ್ಪದಲ್ಲಿ 1 ಸೆಂ.ಮೀ ಮಳೆಯಾಗಿದೆ. ಚಾಮರಾಜನಗರದಲ್ಲಿ ಕನಿಷ್ಠ ಉಷ್ಣಾಂಶ 15.8 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ.
ಮುನ್ಸೂಚನೆ: ಮುಂದಿನ 48 ಗಂಟೆಗಳಲ್ಲಿ ಕರಾವಳಿ, ಉತ್ತರ ಮತ್ತು ದಕ್ಷಿಣ ಒಳನಾಡಿನ ಜಿಲ್ಲೆಗಳಲ್ಲಿ ಮಳೆಯಾಗಲಿದೆ ಎಂದು ಪ್ರಕಟನೆ ತಿಳಿಸಿದೆ.