ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವದಾಸಿಮಯ್ಯ ಜಯಂತಿ: ಅದ್ದೂರಿ ಮೆರವಣಿಗೆ

Last Updated 10 ಜೂನ್ 2012, 9:50 IST
ಅಕ್ಷರ ಗಾತ್ರ

ದಾವಣಗೆರೆ: ಶಿವದಾಸಿಮಯ್ಯ ಜಯಂತ್ಯುತ್ಸವ ಮತ್ತು ಬಸವ ಜಯಂತಿ ಶತಮಾನೋತ್ಸವ ಆಚರಣೆ ಪ್ರಯುಕ್ತ ಅಖಿಲ ಕರ್ನಾಟಕ ಲಿಂಗಾಯತ ಶಿವಸಿಂಪಿ ಮಹಾಸಭಾ ಜಿಲ್ಲಾ ಘಟಕದ ವತಿಯಿಂದ ಶರಣ ಶಿವದಾಸಿಮಯ್ಯ, ಬಸವೇಶ್ವರ ಅವರ ಅಲಂಕೃತ ಭಾವಚಿತ್ರ ಮೆರವಣಿಗೆ ಶನಿವಾರ ನಗರದಲ್ಲಿ ನಡೆಯಿತು.

ನಗರದ ಹಳೇಪೇಟೆ ವೀರಭದ್ರೇಶ್ವರ ದೇವಸ್ಥಾನದಿಂದ ಆರಂಭವಾದ ಮೆರವಣಿಗೆಯು ಪ್ರಮುಖ ಬೀದಿಗಳ ಮೂಲಕ ಸಾಗಿ ವಿನೋಬ ನಗರದ ಮುರುಘರಾಜೇಂದ್ರ ಪ್ರೌಢಶಾಲೆ ಆವರಣದ ವೇದಿಕೆಗೆ ಆಗಮಿಸಿತು.
ಮೆರವಣಿಗೆಯಲ್ಲಿ ನಂದಿಕೋಲು ಕುಣಿತ, ಕೀಲುಕುದುರೆ ಕುಣಿತ, ಜಿಂಜಿಮೇಳದೊಂದಿಗೆ ವೇದಿಕೆಗೆ ವಿಜೃಂಭಣೆಯಿಂದ ಕರೆತರಲಾಯಿತು. ಬೆಳಿಗ್ಗೆ ಬೈಕ್‌ರ‌್ಯಾಲಿ ನಡೆಯಿತು.

ಮೆರವಣಿಗೆಯ ನೇತೃತ್ವವನ್ನು ವಿರಕ್ತಮಠದ ಬಸವಪ್ರಭು ಸ್ವಾಮೀಜಿ ವಹಿಸಿದ್ದರು. ಶಿವಸಿಂಪಿ ಸಮಾಜದ ನೂರಾರು ಜನರು ಭಾಗವಹಿಸಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT