ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶಿವರಾತ್ರೀಶ್ವರ ಶಿವಯೋಗಿಗಳ ಅಂಚೆ ಚೀಟಿ- ನಾಳೆ ಬಿಡುಗಡೆ

Last Updated 19 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ಬೆಂಗಳೂರು: `ಅಂಚೆ ಇಲಾಖೆಯು ಶಿವರಾತ್ರೀಶ್ವರ ಶಿವಯೋಗಿಗಳವರ ಸ್ಮರಣಾರ್ಥ ಅಂಚೆ ಚೀಟಿಯನ್ನು ಹೊರತರುತ್ತಿದೆ' ಎಂದು  ಕರ್ನಾಟಕ ಜಾನಪದ ಅಕಾಡೆಮಿ ಅಧ್ಯಕ್ಷ ಗೊ.ರು.ಚನ್ನಬಸಪ್ಪ ಹೇಳಿದರು.

ನಗರದಲ್ಲಿ ಬುಧವಾರ ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, `ಇದೇ ಡಿ. 21 ರಂದು ಶುಕ್ರವಾರ ಬೆಳಿಗ್ಗೆ 10 ಕ್ಕೆ ನಗರದ ಬನಶಂಕರಿ 2 ನೇ ಹಂತದಲ್ಲಿರುವ ಜೆಎಸ್‌ಎಸ್ ಪಬ್ಲಿಕ್ ಶಾಲಾ ಆವರಣದಲ್ಲಿ ಶಿವಯೋಗಿಗಳವರ ಅಂಚೆಚೀಟಿ ಲೋಕಾರ್ಪಣೆ ಕಾರ್ಯಕ್ರಮ ನಡೆಯಲಿದೆ. ಶಾಲೆ ಆವರಣದಲ್ಲಿ ನಿರ್ಮಿಸಿರುವ ಶಿವಯೋಗಿ ಸಭಾಭವನದ ಉದ್ಘಾಟನೆಯು ನಡೆಯಲಿದೆ' ಎಂದು ವಿವರಿಸಿದರು.

`ಐದು ರೂಪಾಯಿ ಮುಖಬೆಲೆಯಿರುವ ಅಂಚೆ ಚೀಟಿಯು ಇದಾಗಿದೆ. ಅಂಚೆಚೀಟಿಯು ಬಿಡುಗಡೆಯಾದ ನಂತರ ದೇಶದ ಎಲ್ಲಾ ರಾಜ್ಯಗಳ 1100 ಅಂಚೆ ಕಚೇರಿಗಳಲ್ಲಿ ಈ ವಿಶೇಷ ಅಂಚೆಚೀಟಿಯು ಮಾರಾಟಕ್ಕೆ ಲಭ್ಯವಿರುತ್ತದೆ' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT