ಶುಕ್ರವಾರ, 10 ಮೇ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೃತಿ-ಚಂದ್ರಚೂಡ ಮದುವೆ ಅಸಿಂಧು: ಕೋರ್ಟ್‌ಗೆ ಮನವಿ

Last Updated 20 ಜುಲೈ 2013, 20:03 IST
ಅಕ್ಷರ ಗಾತ್ರ

ಬೆಂಗಳೂರು: ನಟಿ ಶೃತಿ ಜತೆಗಿನ ಎರಡನೇ ವಿವಾಹವನ್ನು ಅಸಿಂಧುಗೊಳಿಸುವಂತೆ ಪತ್ರಕರ್ತ ಚಂದ್ರಚೂಡ ಅವರು ಶನಿವಾರ ಕೌಟುಂಬಿಕ ನ್ಯಾಯಾಲಯಕ್ಕೆ ಲಿಖಿತ ಹೇಳಿಕೆ ನೀಡಿದ್ದಾರೆ.

`ಮೊದಲ ಪತ್ನಿಯೊಂದಿಗೆ ದಾಂಪತ್ಯ ಮುಂದುವರಿಸುವ ಪ್ರಶ್ನೆಯೇ ಇಲ್ಲ. ಎರಡನೇ ಮದುವೆ ವಿವಾದದಿಂದ ಸಾಕಷ್ಟು ನೋವುಂಟಾಗಿದೆ. ಮುಂದೆ ತೊಂದರೆಯಾಗಬಾರದು ಎಂಬ ಕಾರಣಕ್ಕೆ ವಿವಾಹವನ್ನು ಅಸಿಂಧುಗೊಳಿಸಬೇಕೆಂದು ಕೋರುತ್ತಿದ್ದೇನೆ' ಎಂದು ಚಂದ್ರಚೂಡ ಅವರು ತಮ್ಮ ವಕೀಲರ ಮೂಲಕ ಲಿಖಿತ ಹೇಳಿಕೆಯನ್ನು ನ್ಯಾಯಾಲಯಕ್ಕೆ ಸಲ್ಲಿಸಿದರು.

`ಪತಿ ನನಗೆ ವಿಚ್ಛೇದನ ನೀಡದೆ, ಎರಡನೇ ಮದುವೆಯಾಗಿದ್ದಾರೆ' ಎಂದು ಚಂದ್ರಚೂಡ ಅವರ ಮೊದಲ ಪತ್ನಿ ಮಂಜುಳಾ ಕೌಟುಂಬಿಕ ನ್ಯಾಯಾಲಯದ ಮೆಟ್ಟಿಲೇರಿದ್ದರು. ಈ ಸಂಬಂಧ ವಿಚಾರಣೆಗೆ ಹಾಜರಾಗುವಂತೆ ಚಂದ್ರಚೂಡ ಮತ್ತು ಶೃತಿ ಅವರಿಗೆ ನ್ಯಾಯಾಲಯ ಎರಡು ಬಾರಿ ಸಮನ್ಸ್ ನೀಡಿತ್ತು. ಆದರೆ, ದಂಪತಿ ಗೈರು ಹಾಜರಾಗಿದ್ದರು.

ಈ ಪ್ರಕರಣದ ವಿಚಾರಣೆಯನ್ನು ನ್ಯಾಯಾಲಯ ಆಗಸ್ಟ್ 23ಕ್ಕೆ ಮುಂದೂಡಿದ್ದು, ಆ ದಿನ ಶೃತಿ ವಿಚಾರಣೆಗೆ ಖುದ್ದು ಹಾಜರಾಗಬೇಕು ಎಂದು ನ್ಯಾಯಾಲಯ ಸೂಚನೆ ನೀಡಿದೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT