ಮಂಗಳವಾರ, 16 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೈಕ್ಷಣಿಕ ಸಾಲ ಬ್ಯಾಂಕುಗಳಿಗೆ ಸೂಚನೆ

Last Updated 3 ಡಿಸೆಂಬರ್ 2012, 19:30 IST
ಅಕ್ಷರ ಗಾತ್ರ

ಮೊಹಾಲಿ (ಪಿಟಿಐ): ವಿದ್ಯಾರ್ಥಿಗಳಿಗೆ ಯಾವುದೇ ಕಾರಣಕ್ಕೂ ಶೈಕ್ಷಣಿಕ ಸಾಲ ನಿರಾಕರಿಸಬಾರದು ಎಂದು ಕೇಂದ್ರ ಹಣಕಾಸು ಸಚಿವ ಪಿ. ಚಿದಂಬರಂ ಮತ್ತೊಮ್ಮೆ ಬ್ಯಾಂಕುಗಳಿಗೆ ಎಚ್ಚರಿಕೆ ನೀಡಿದ್ದಾರೆ.

ಸೋಮವಾರ ಇಲ್ಲಿ ಇಂಡಿಯನ್ ಸ್ಕೂಲ್ ಆಫ್ ಬಿಸಿನೆಸ್ ಆಯೋಜಿಸಿದ್ದ ಕಾರ್ಯಕ್ರಮದಲ್ಲಿ ಅವರು ಮಾತನಾಡಿದರು.

ಸುಮಾರು 24 ಲಕ್ಷ ವಿದ್ಯಾರ್ಥಿಗಳು ಬ್ಯಾಂಕಿನಿಂದ ರೂ.52 ಸಾವಿರ ಕೋಟಿ ಶೈಕ್ಷಣಿಕ ಸಾಲ ಪಡೆದಿದ್ದಾರೆ. ಹೆಚ್ಚುವರಿ ಸಾಲದಬೇಡಿಕೆ ಪೂರೈಸುವಂತೆ ಬ್ಯಾಂಕುಗಳಿಗೆ ಸೂಚಿಸಲಾಗಿದೆ. ಇಂದಿನ ವಿದ್ಯಾರ್ಥಿಗಳೇ ನಾಳಿನ ನವ ಭಾರತ ನಿರ್ಮಾಣ ಶಿಲ್ಪಿಗಳು ಎಂದು ಅವರು ಹೇಳಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT