ಶನಿವಾರ, 20 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶೋಭಾ ಡೇ ವಿರುದ್ಧ ಆಕ್ರೋಶ

Last Updated 1 ಆಗಸ್ಟ್ 2013, 19:59 IST
ಅಕ್ಷರ ಗಾತ್ರ

ಮುಂಬೈ/ಕೋಲ್ಕತ್ತ (ಪಿಟಿಐ): ಪ್ರತ್ಯೇಕ ಮುಂಬೈ ರಾಜ್ಯ ಮಾಡಬೇಕೆಂಬ ಅಂಕಣಕಾರ್ತಿ ಶೋಭಾ ಡೇ ಸಲಹೆಯನ್ನು `ಅವಿವೇಕತನದ್ದು' ಎಂದಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಪೃಥ್ವಿರಾಜ್ ಚವಾಣ್, `ರಾಜ್ಯವು ಏಕತೆಯಿಂದಲೇ ಉಳಿಯುವುದು'    ಎಂದಿದ್ದಾರೆ.

`ಶೋಭಾ ಹೇಳಿಕೆಯನ್ನು ಗಂಭೀರವಾಗಿ ಪರಿಗಣಿಸಬಾರದು. ಮುಂಬೈಯಾಗಲೀ ಅಥವಾ ವಿದರ್ಭವಾಗಲೀ ಮಹಾರಾಷ್ಟ್ರದಿಂದ ಪ್ರತ್ಯೇಕಗೊಳ್ಳುವುದಿಲ್ಲ' ಎಂದು ಅವರು ಗುರುವಾರ ಸ್ಪಷ್ಟಪಡಿಸಿದ್ದಾರೆ.

ಪ್ರತಿಭಟನೆ: ಶೋಭಾ ಹೇಳಿಕೆಗೆ ಶಿವಸೇನಾ ಮತ್ತು ಮಹಾರಾಷ್ಟ್ರ ನವನಿರ್ಮಾಣ ಸೇನಾ ಆಕ್ರೋಶ ವ್ಯಕ್ತಪಡಿಸಿವೆ. ಶಿವಸೇನಾ ಕಾರ್ಯಕರ್ತರು ಶೋಭಾ ಮನೆಯ ಮುಂದೆ ಪ್ರತಿಭಟನೆ ನಡೆಸಿದ್ದಾರೆ. ಶೋಭಾ ವಿರುದ್ಧ ಅಪರಾಧ ಪ್ರಕರಣ ದಾಖಲಿಸುವಂತೆ ಶಿವಸೇನಾ ನಾಯಕ ಸಂಜಯ್ ರಾವತ್ ಆಗ್ರಹಿಸಿದ್ದರೆ, ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ ಈ ಕಾದಂಬರಿಕಾರ್ತಿಯ ಮೇಲೆ ವಾಗ್ದಾಳಿ ಮಾಡಿದ್ದಾರೆ.

ಈ ಮಧ್ಯೆ, ತಮ್ಮ ಹೇಳಿಕೆಯನ್ನು ವಾಪಸ್ ಪಡೆಯಲು ಅಥವಾ ಕ್ಷಮೆ ಯಾಚಿಸಲು ನಿರಾಕರಿಸಿರುವ ಶೋಭಾ, ತಮಗೆ ಜನರು ಬೆಂಬಲ ಸೂಚಿಸುತ್ತಿರುವುದಕ್ಕೆ ಸಂತಸ ವ್ಯಕ್ತಪಡಿಸಿದ್ದಾರೆ.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT