ಸಿದ್ದಾಪುರ: `ಮನರಂಜನೆಯ ಮಾಧ್ಯಮಗಳಿರದ ಹಿಂದಿನ ಕಾಲದಲ್ಲಿ ದುಡಿಮೆಯ ಶ್ರಮ ಪರಿಹಾರಕ್ಕಾಗಿ ಜಾನಪದ ಕಲೆ ಬೆಳೆದುಬಂದಿತು' ಎಂದು ಕೆಡಿಸಿಸಿ ಬ್ಯಾಂಕ್ ನಿರ್ದೇಶಕ ಭಾಸ್ಕರ ಹೆಗಡೆ ಕಾಗೇರಿ ಹೇಳಿದರು.
ಹಾಳದಕಟ್ಟಾದ ಜಗದ್ಗುರು ಮುರುಘರಾಜೇಂದ್ರ ಅಂಧರ ಶಾಲೆಯಲ್ಲಿ ಭಾನುವಾರ ಏರ್ಪಡಿಸಿದ್ದ `ಜಾನಪದ ಕಲೋತ್ಸವ, 2012-2013' ಕಾರ್ಯಕ್ರಮದ ಮುಕ್ತಾಯ ಸಮಾರಂಭದ ಮುಖ್ಯ ಅತಿಥಿಯಾಗಿ ಅವರು ಮಾತನಾಡಿದರು.