ಶುಕ್ರವಾರ, 29 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರವಣ ಸಾಧನ ವಿತರಣೆ

Last Updated 8 ಡಿಸೆಂಬರ್ 2013, 19:30 IST
ಅಕ್ಷರ ಗಾತ್ರ

ಬಿಎಂಎಸ್ ಎಂಜಿನಿಯರಿಂಗ್‌ ಕಾಲೇಜಿನ ವ್ಯವಹಾರ ನಿರ್ವಹಣೆ ಹಾಗೂ ಸಂಶೋಧನಾ ಕೇಂದ್ರ ವಿಭಾಗವು ರೋಟರಿ ವಿಜಯಪುರದ ಸಹಯೋಗದೊಂದಿದೆ ಅರುಣ ಚೇತನ ಶಾಲೆಯ ಶ್ರವಣದೋಷವಿರುವ ಮಕ್ಕಳಿಗೆ ಶ್ರವಣ ಸಾಧನಗಳನ್ನು ವಿತರಿಸಿತು.

ಬಿಎಂಎಸ್ ಕಾಲೇಜು ಆವರಣದಲ್ಲಿ ನಡೆದ ‘ಸಿಟಿಜನ್ ಫಸ್ಟ್; ಮ್ಯಾನೇಜರ್‌ ನೆಕ್ಟ್ಸ್‌’ ಎಂಬ ಈ ಕಾರ್ಯ್ರಕಮಕ್ಕೆ ಕಾಲೇಜಿನ ಎಂಬಿಎ ವಿಭಾಗದ ಮುಖ್ಯಸ್ಥ ಡಾ. ಎಸ್.ನಾಗೇಂದ್ರ ಅವರ ಮಾರ್ಗದರ್ಶನವಿತ್ತು. ಈ ಸಂದರ್ಭದಲ್ಲಿ ವಿವಿಧ ಬಗೆಯ ಶ್ರವಣ ಸಮಸ್ಯೆಗಳಿಂದ ಬಳಲುತ್ತಿರುವ ವಿಶಿಷ್ಟ ಸಾಮರ್ಥ್ಯದ ಮಕ್ಕಳಿಗೆ ಶ್ರವಣ ಸಾಧನಗಳನ್ನು ವಿತರಿಸಲಾಯಿತು. ಬಿಎಂಎಸ್‌ಸಿಇ- ಕಾಲೇಜಿನ ಈ ಚಟುವಟಿಕೆಯು ‘ಅರುಣ ಚೇತನ’ ಶಾಲೆಯ ಮಕ್ಕಳ ಬಾಳಿನಲ್ಲಿ ಹೊಸ ಭರವಸೆ ಮೂಡಿಸಿತು. 

ಬಿಎಂಎಸ್‌ಸಿಇಯ ಪ್ರಾಂಶುಪಾಲ ಡಾ. ಮಲ್ಲಿಕಾರ್ಜುನ ಬಾಬು ಹಾಗೂ ರೋಟರಿ ವಿಜಯಪುರ ಟ್ರಸ್ಟ್‌ನ ಅಧ್ಯಕ್ಷ ಸತ್ಯಜೋತಪ್ಪ ಈ ಸಂದರ್ಭದಲ್ಲಿ ಹಾಜರಿದ್ದರು.  

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT