ಶ್ರೀನಗರ(ಪಿಟಿಐ): ಕಾಶ್ಮೀರ ಕಣಿವೆಯಲ್ಲಿ ಚಳಿಯ ಅಲೆ ಮುಂದುವರಿದಿದ್ದು, ಶ್ರಿನಗರದಲ್ಲಿ ಭಾನುವಾರ ರಾತ್ರಿ ಪ್ರಸಕ್ತ ಚಳಿಗಾಲದ ಕನಿಷ್ಠ ಉಷ್ಣಾಂಶ -4.3 ಡಿಗ್ರಿ ಸೆಲ್ಸಿಯಸ್ ದಾಖಲಾಗಿದೆ. ಪಂಜಾಬ್ ಹರಿಯಾಣದಲ್ಲಿ ಸೋಮವಾರ ದಟ್ಟ ಮಂಜು ಮುಸುಕಿದ್ದು, ದಾರಿ ಕಾಣದೆ ವಾಹನಗಳ ಮಧ್ಯೆ ಸಂಭವಿಸಿದ ಡಿಕ್ಕಿಯಲ್ಲಿ ಇಬ್ಬರು ಮೃತಪಟ್ಟಿದ್ದಾರೆ.