ಹೈದರಾಬಾದ್ (ಐಎಎನ್ಎಸ್): ಆಂಧ್ರದ ಅನಂತ್ಪುರಂ ಜಿಲ್ಲೆಯಲ್ಲಿ ವಶಪಡಿಸಿಕೊಳ್ಳಲಾದ 4.9 ಕೋಟಿ ರೂ ಮೊತ್ತದ ಭಾರಿ ಹಣಕ್ಕೆ ಸಂಬಂಧಿಸಿದಂತೆ ತನಿಖೆಗಾಗಿ ಓಬಳಾಪುರಂ ಗಣಿ ಕಂಪೆನಿಯ ವ್ಯವಸ್ಥಾಪಕ ನಿರ್ದೇಶಕ ಬಿ.ವಿ. ಶ್ರೀನಿವಾಸ ರೆಡ್ಡಿ ಅವರನ್ನು ಸಿಬಿಐ ಬಳ್ಳಾರಿಗೆ ಕರೆ ತಂದಿದೆ.
ಈ ಸಂಬಂಧ ಬಂಧಿತರಾಗಿರುವ ಇಬ್ಬರು ವ್ಯಕ್ತಿಗಳು ವಶಪಡಿಸಿಕೊಳ್ಳಲಾದ ಭಾರಿ ಮೊತ್ತದ ಹಣವು ಶ್ರೀನಿವಾಸ ರೆಡ್ಡಿ ಅವರಿಗೆ ಸೇರಿದ್ದು ಎಂದು ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.