ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಶ್ರೀರಂಗನಾಥ ಸ್ವಾಮಿಗೆ ಕೋಟಿ ಬೆಲೆಯ ಕಿರೀಟ

Last Updated 19 ಏಪ್ರಿಲ್ 2013, 13:36 IST
ಅಕ್ಷರ ಗಾತ್ರ

ಮಾಗಡಿ: ತಿರುಮಲ ರಂಗನಾಥ ಸ್ವಾಮಿ ಮೂಲ ದೇವರಿಗೆ ಶ್ರೀರಂಗಸೇವಾ ಟ್ರಸ್ಟ್‌ನ ವತಿಯಿಂದ ರೂ.1 ಕೋಟಿ ಬೆಲೆ ಬಾಳುವ ವಜ್ರಖಚಿತ ಕಿರೀಟವನ್ನು ಅರ್ಪಿಸುತ್ತಿದ್ದೇವೆ ಎಂದು ಟ್ರಸ್ಟ್‌ನ ಅಧ್ಯಕ್ಷ ಟಿ.ಎಸ್ ಸತೀಶ್ ತಿಳಿಸಿದರು.

ಇಲ್ಲಿನ ತಿರುಮಲ ಪರಕಾಲ ಮಠದ ಆವರಣದಲ್ಲಿ ಶ್ರೀರಂಗಸೇವಾ ಟ್ರಸ್ಟ್ ವತಿಯಿಂದ ನಡೆದ ಪತ್ರಿಕಾ ಗೋಷ್ಠಿಯಲ್ಲಿ ಅವರು ಈ ವಿಷಯ ತಿಳಿಸಿದರು.

`ಕುಡಿಯುವ ನೀರು ಸಂಗ್ರಹಣೆಗಾಗಿ ದೇವಾಲಯದಲ್ಲಿ ಮಳೆಕೊಯ್ಲು ನಿರ್ಮಿಸಲಾಗುವುದು ಎಂದು ಅವರು ಹೇಳಿದರು.

ಪ್ರಾಚ್ಯವಸ್ತು ಇಲಾಖೆಯ ವಿಳಂಬದಿಂದಾಗಿ ಪೂರ್ವ ದ್ವಾರದ ಮೇಲಿನ ರಾಯಗೋಪುರ ಜೀರ್ಣೋದ್ಧಾರ ಕಾರ್ಯ ಆರಂಭವಾಗಿಲ್ಲ.

ದೇವಾಲಯದ ಸುತ್ತಮುತ್ತಲ ರಥಬೀದಿಯಲ್ಲಿ ಸ್ವಚ್ಛತೆ ಕಾಯ್ದುಕೊಳ್ಳಲು ಎಲ್ಲರೂ ಸಹಕರಿಸಬೇಕು' ಎಂದು ಸತೀಶ್ ತಿಳಿಸಿದರು.

ಮಾಗಡಿ ಯೋಜನಾ ಪ್ರಾಧಿಕಾರದ ಅಧ್ಯಕ್ಷ ನಾರಾಯಣ ಸ್ವಾಮಿ, ವೆಂಕಟೇಶ್ ಅಯ್ಯಂಗಾರ್, ಟಿ.ಎಸ್ ಪ್ರಭು, ರಾಮಾನುಜಂ ಉಪಸ್ಥಿತರಿದ್ದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT