ಹಾವೇರಿ: `ಜಾಮೀನಿಗಾಗಿ ಲಂಚ ನೀಡಿದ ಪ್ರಕರಣದಲ್ಲಿ ಭಾಗಿಯಾಗಿ ಭ್ರಷ್ಟರನ್ನು ರಕ್ಷಿಸಲು ಮುಂದಾಗಿದ್ದ ಬಿ.ಶ್ರೀರಾಮುಲು ಅವರಂತಹ ರಾಜಕಾರಣಿಗಳು ಸಾರ್ವಜನಿಕ ಜೀವನದಲ್ಲಿ ಇರಬೇಕೋ ಬೇಡವೋ ಎಂಬುದನ್ನು ರಾಜ್ಯದ ಜನರು ನಿರ್ಧರಿಸಬೇಕು~ ಎಂದು ಸಮಾಜ ಪರಿವರ್ತನಾ ಸಮುದಾಯದ ಅಧ್ಯಕ್ಷ ಎಸ್.ಆರ್. ಹಿರೇಮಠ ಹೇಳಿದರು.
ಸೋಮವಾರ ಇಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಹಿರೇಮಠ ಹೇಳಿದರು.
ಗಣಿ ಲೂಟಿ ಮಾಡಿರುವ ಭ್ರಷ್ಟರನ್ನು ರಕ್ಷಿಸಲು ಮುಂದಾದ ಬಿ.ಶ್ರೀರಾಮುಲು ಅವರು ಸಾಚಾ ಆಗಲು ಹೇಗೆ ಸಾಧ್ಯ ಎಂದು ಪ್ರಶ್ನಿಸಿದರು.