`ಜಬ್ಬಾರ್ ಖಾನ್ ಹೊನ್ನಳ್ಳಿ ಮತ್ತು ವಿಜಯ ಸಂಕೇಶ್ವರ ಅವರನ್ನು ಕೆಜೆಪಿ ರಾಜ್ಯ ಘಟಕದ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಧಾರವಾಡದ ರಾಜೇಂದ್ರ ಗೋಖಲೆ ಅವರನ್ನು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಾಲಯ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಲಾಗಿದೆ' ಎಂದು ಯಡಿಯೂರಪ್ಪ ತಿಳಿಸಿದರು.
ರಾಜ್ಯ ಘಟಕದ ಉಳಿದ ಪದಾಧಿಕಾರಿ ಪಟ್ಟಿಯನ್ನು ಪೂರ್ಣಗೊಳಿಸಿ ಶೀಘ್ರದಲ್ಲೆ ಪ್ರಕಟಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು ಅವರಿಗೆ ತಾಲ್ಲೂಕುಮಟ್ಟದ ಪದಾಧಿಕಾರಿಗಳನ್ನು ನೇಮಿಸಿಕೊಳ್ಳುವಂತೆ ಸೂಚಿಸಿದ್ದೇನೆ. ಸೋಮವಾರದಿಂದ ಡಿ. 22ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಸಭೆ ನಡೆಸಲಾಗುವುದು. ರಾಜ್ಯಮಟ್ಟದ ಎಲ್ಲ ಮೋರ್ಚಾಗಳ ಪ್ರಮುಖರನ್ನು ನೇಮಿಸಲಾಗುವುದು' ಎಂದರು.