ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕೇಶ್ವರ, ಹೊನ್ನಳ್ಳಿಗೆ ಉಪಾಧ್ಯಕ್ಷ ಪಟ್ಟ

Last Updated 16 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

`ಜಬ್ಬಾರ್ ಖಾನ್ ಹೊನ್ನಳ್ಳಿ ಮತ್ತು ವಿಜಯ ಸಂಕೇಶ್ವರ ಅವರನ್ನು  ಕೆಜೆಪಿ ರಾಜ್ಯ ಘಟಕದ ಹಿರಿಯ ಉಪಾಧ್ಯಕ್ಷರನ್ನಾಗಿ ನೇಮಿಸಲಾಗಿದೆ. ಧಾರವಾಡದ ರಾಜೇಂದ್ರ ಗೋಖಲೆ ಅವರನ್ನು ಬೆಂಗಳೂರಿನಲ್ಲಿ ಪಕ್ಷದ ಕಾರ್ಯಾಲಯ ಕಾರ್ಯದರ್ಶಿಯಾಗಿ ನಿಯುಕ್ತಿಗೊಳಿಸಲಾಗಿದೆ' ಎಂದು ಯಡಿಯೂರಪ್ಪ ತಿಳಿಸಿದರು.

ರಾಜ್ಯ ಘಟಕದ ಉಳಿದ ಪದಾಧಿಕಾರಿ ಪಟ್ಟಿಯನ್ನು ಪೂರ್ಣಗೊಳಿಸಿ ಶೀಘ್ರದಲ್ಲೆ ಪ್ರಕಟಿಸಲಾಗುವುದು. ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಪದಾಧಿಕಾರಿಗಳನ್ನು ನೇಮಿಸಲಾಗಿದ್ದು ಅವರಿಗೆ ತಾಲ್ಲೂಕುಮಟ್ಟದ ಪದಾಧಿಕಾರಿಗಳನ್ನು ನೇಮಿಸಿಕೊಳ್ಳುವಂತೆ ಸೂಚಿಸಿದ್ದೇನೆ. ಸೋಮವಾರದಿಂದ ಡಿ. 22ರವರೆಗೆ ರಾಜ್ಯದ ಎಲ್ಲ ಜಿಲ್ಲೆಗಳಲ್ಲಿ ಜಿಲ್ಲಾಮಟ್ಟದ ಸಭೆ ನಡೆಸಲಾಗುವುದು. ರಾಜ್ಯಮಟ್ಟದ ಎಲ್ಲ ಮೋರ್ಚಾಗಳ ಪ್ರಮುಖರನ್ನು ನೇಮಿಸಲಾಗುವುದು' ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT