ಶುಕ್ರವಾರ, 19 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಕ್ರಾಂತಿ ಬಳಿಕ ಸ್ಪಷ್ಟ ತೀರ್ಮಾನ

Last Updated 24 ಡಿಸೆಂಬರ್ 2012, 19:59 IST
ಅಕ್ಷರ ಗಾತ್ರ

ರಾಯಚೂರು: ರಾಜ್ಯದ ಈಗಿನ ಸರ್ಕಾರದ ಬಗ್ಗೆ ಮಾತನಾಡಲು ಯಾವುದೇ ಮುಲಾಜಿಲ್ಲ. ಈ ಸರ್ಕಾರವನ್ನು ಉಳಿಸುವ ಅಥವಾ ತೆಗೆಯುವ ಕುರಿತು ಕರ್ನಾಟಕ ಜನತಾ ಪಕ್ಷವು (ಕೆಜೆಪಿ) ಸಂಕ್ರಾಂತಿ ಹಬ್ಬದ ಬಳಿಕ  ಸ್ಪಷ್ಟ ತೀರ್ಮಾನ ಕೈಗೊಳ್ಳಲಿದೆ ಎಂದು ಪಕ್ಷದ ಅಧ್ಯಕ್ಷ ಬಿ.ಎಸ್. ಯಡಿಯೂರಪ್ಪ ತಿಳಿಸಿದರು.

ಪಕ್ಷಕ್ಕೆ ಬರುವವರು ಬರಲಿ; ಬಾರದೆ ಇರುವವರು ಇರಲಿ ಎಂದು ಅವರು ಪತ್ರಕರ್ತರ ಪ್ರಶ್ನೆಗೆ ಉತ್ತರಿಸಿದರು.

ಬಿಜೆಪಿ ರಾಜ್ಯ ಘಟಕದ ಅಧ್ಯಕ್ಷ ಈಶ್ವರಪ್ಪ ಅವರ ನಿವಾಸದ ಮೇಲೆ ಲೋಕಾಯುಕ್ತ ದಾಳಿ ಕುರಿತು ಪ್ರಶ್ನಿಸಿದಾಗ, `ದೇವ್ರೇ ಕಾಯ್ಲಿ . ಅವರು ದೊಡ್ಡವರು. ನಾನು ನಿನ್ನೆ ಮೊನ್ನೆ ಹುಟ್ಟಿದ ಪಕ್ಷದ ಅಧ್ಯಕ್ಷ. ಅವರ ಬಗ್ಗೆ ನಾನೇನೂ ಹೇಳಲೊಲ್ಲೆ ಎಂದು ಉತ್ತರಿಸಿದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT