ಗಾಯಕ ಡಾ.ಆರ್.ಕೆ. ಶ್ರೀಕಂಠನ್ ಅವರು `2012ರ ನಿರ್ಮಾಣ್-ಪುರಂದರ-ಸಂಗೀತರತ್ನ~ ಪ್ರಶಸ್ತಿಗೆ ಭಾಜನರಾಗಿದ್ದು, ಇವರಿಗೆ ಉಡುಪಿಯ ಭಂಡಾರಕೇರಿ ಮಠದ ವಿದ್ಯೇಶತೀರ್ಥ ಸ್ವಾಮೀಜಿ ಪ್ರಶಸ್ತಿ ಪ್ರದಾನ ಮಾಡಲಿದ್ದಾರೆ. ಕರ್ನಾಟಕ ಶಾಸ್ತ್ರೀಯ ಸಂಗೀತ ಸುಧೆಯನ್ನು ಶೋತೃಗಳಿಗೆ ಉಣಬಡಿಸುವ ಶ್ರೀಕಂಠನ್ ಅವರು ಈ ಪರಂಪರೆಯನ್ನು ಮುಂದಿನ ತಲೆಮಾರಿಗೂ ಉಳಿಸಿ, ಬೆಳೆಸುವ ಕಾಯಕದಲ್ಲಿ ತೊಡಗಿದ್ದಾರೆ. ಭಕ್ತಿ ಪಂಥದ ದಾಸ ಪರಂಪರೆಯನ್ನು ಬೆಳೆಸುವ ಸಲುವಾಗಿ ಕಳೆದ ಮೂರು ವರ್ಷಗಳಿಂದ ಸಂಸ್ಥೆ ಈ ಪ್ರಶಸ್ತಿ ನೀಡುತ್ತಾ ಬಂದಿದೆ.