ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಘಟನೆಗಳಿಂದ ಭಾಷೆ ಉಳಿವು

Last Updated 12 ಫೆಬ್ರುವರಿ 2012, 19:30 IST
ಅಕ್ಷರ ಗಾತ್ರ

ವಿಜಯಪುರ: `ಕನ್ನಡ ಪರ ಸಂಘಟನೆಗಳಿಂದ ಮಾತ್ರವೇ ಮಾತೃಭಾಷೆ ಉಳಿಯಲು ಸಾಧ್ಯ~ ಎಂದು ಜಿ.ಪಂ.ಸದಸ್ಯ ಬಿ.ರಾಜಣ್ಣ ತಿಳಿಸಿದರು.

ಸಮೀಪದ ನಲ್ಲೂರು ಗ್ರಾಮದಲ್ಲಿ ಇತ್ತೀಚೆಗೆ ನೂತನವಾಗಿ ರಚನೆಗೊಂಡಿರುವ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.

`ಕನ್ನಡ ಭಾಷೆ ನೂರಾರು ವರ್ಷಗಳ ಇತಿಹಾಸ ಹೊಂದಿದೆ. ಆದ್ದರಿಂದ ಪರಂಪರೆಯ ಉಳಿವಿಗಾಗಿ ನಮ್ಮ ನಾಡು, ಸಂಸ್ಕೃತಿ, ಕಲೆ ಸಾಹಿತ್ಯದ ಬಗ್ಗೆ ಮಕ್ಕಳಿಗೆ ಚಿಕ್ಕಂದಿನಲ್ಲೇ ಅರಿವು ಮೂಡಿಸಬೇಕು~ ಎಂದು ಹೇಳಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT