ವಿಜಯಪುರ: `ಕನ್ನಡ ಪರ ಸಂಘಟನೆಗಳಿಂದ ಮಾತ್ರವೇ ಮಾತೃಭಾಷೆ ಉಳಿಯಲು ಸಾಧ್ಯ~ ಎಂದು ಜಿ.ಪಂ.ಸದಸ್ಯ ಬಿ.ರಾಜಣ್ಣ ತಿಳಿಸಿದರು.
ಸಮೀಪದ ನಲ್ಲೂರು ಗ್ರಾಮದಲ್ಲಿ ಇತ್ತೀಚೆಗೆ ನೂತನವಾಗಿ ರಚನೆಗೊಂಡಿರುವ ಸುವರ್ಣ ಕರ್ನಾಟಕ ಜನಶಕ್ತಿ ವೇದಿಕೆಯ ಉದ್ಘಾಟನಾ ಸಮಾರಂಭದಲ್ಲಿ ಅವರು ಮಾತನಾಡಿದರು.
`ಕನ್ನಡ ಭಾಷೆ ನೂರಾರು ವರ್ಷಗಳ ಇತಿಹಾಸ ಹೊಂದಿದೆ. ಆದ್ದರಿಂದ ಪರಂಪರೆಯ ಉಳಿವಿಗಾಗಿ ನಮ್ಮ ನಾಡು, ಸಂಸ್ಕೃತಿ, ಕಲೆ ಸಾಹಿತ್ಯದ ಬಗ್ಗೆ ಮಕ್ಕಳಿಗೆ ಚಿಕ್ಕಂದಿನಲ್ಲೇ ಅರಿವು ಮೂಡಿಸಬೇಕು~ ಎಂದು ಹೇಳಿದರು.