ಮಂಗಳವಾರ, 23 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಚಾರ ಪೊಲೀಸರಿಗೆ ಉಚಿತ ನೇತ್ರ ತಪಾಸಣೆ

Last Updated 11 ಜನವರಿ 2012, 19:40 IST
ಅಕ್ಷರ ಗಾತ್ರ

ಬೆಂಗಳೂರು: ನಗರ ಸಂಚಾರ ಪೊಲೀಸರಿಗೆ ಉಚಿತ ನೇತ್ರ ತಪಾಸಣೆ ನಡೆಸುವ `ಪೊಲೀಸ್ ವಿಷನ್ ಅವರ್ ಮಿಷನ್~ ಕಾರ್ಯಕ್ರಮಕ್ಕೆ ನಾರಾಯಣ ನೇತ್ರಾಲಯದಲ್ಲಿ ಮಂಗಳವಾರ ಚಾಲನೆ ನೀಡಲಾಯಿತು.

ಅಶೋಕನಗರದ ಕ್ಯಾಸಲ್ ಸ್ಟ್ರೀಟ್‌ನಲ್ಲಿರುವ ನಾರಾಯಣ ನೇತ್ರಾಲಯ-3 ರಲ್ಲಿ ನಡೆದ ಕಾರ್ಯಕ್ರಮಕ್ಕೆ ಪೂರ್ವ ಸಂಚಾರ ವಿಭಾಗದ ಡಿಸಿಪಿ ಎನ್. ಮುತ್ತಣ್ಣ ಚಾಲನೆ ನೀಡಿದರು.

`ಸಂಚಾರ ಪೊಲೀಸರು ಹೆಚ್ಚಿನ ಸಮಯ ರಸ್ತೆಗಳಲ್ಲಿ ಕಳೆಯುತ್ತಾರೆ. ಸುಮಾರು ಹನ್ನೆರಡು ಗಂಟೆ ಕಾಲ ಕೆಲಸ ಮಾಡುವ ಅವರು ದೂಳು, ಹೊಗೆಯಿಂದಾಗಿ ಕಣ್ಣಿನ ತೊಂದರೆ ಅನುಭವಿಸುತ್ತಾರೆ. ಕೆಲವರು ರಕ್ತದೊತ್ತಡ ಮಧುಮೇಹದಿಂದಲೂ ಬಳಲುತ್ತಾರೆ~ ಎಂದು ನಾರಾಯಣ ನೇತ್ರಾಲಯದ ಅಧ್ಯಕ್ಷ ಡಾ.ಕೆ.ಭುಜಂಗಶೆಟ್ಟಿ ಹೇಳಿದರು.

`ಪೊಲೀಸರಿಗೆ ತಪಾಸಣೆ ಮಾಡುವ ಉದ್ದೇಶದಿಂದ ಈ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ನಗರದಲ್ಲಿರುವ ನಮ್ಮ ಮೂರು ಆಸ್ಪತ್ರೆಗಳಲ್ಲಿ ಯಾವುದಾದರೂ ಒಂದು ಆಸ್ಪತ್ರೆಗೆ ಬಂದು ತಪಾಸಣೆ ಮಾಡಿಸಿಕೊಳ್ಳಬಹುದು. ಆಯ್ದ ಪೊಲೀಸ್ ಠಾಣೆ ಮತ್ತು ಸ್ಥಳಗಳಲ್ಲಿಯೂ ಶಿಬಿರ ಆಯೋಜಿಸಲಾಗುತ್ತದೆ. ನೇತ್ರದಾನ ಮಾಡುವಂತೆಯೂ ಸಿಬ್ಬಂದಿಯನ್ನು ಕೋರಲಾಗುತ್ತದೆ~ ಎಂದರು. ಮುನ್ನೂರು ಸಿಬ್ಬಂದಿ ತಪಾಸಣೆ ಮಾಡಿಸಿಕೊಂಡರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT