ಕೇಂದ್ರ ಮತ್ತು ಮಧ್ಯಪ್ರದೇಶ ಸರ್ಕಾರಗಳು ಸಂತ್ರಸ್ತರ ಪರವಾಗಿ ಕೆಲಸ ಮಾಡುವುದನ್ನು ಬಿಟ್ಟು ಬಹುರಾಷ್ಟ್ರೀಯ ಕಂಪೆನಿಗಳ ರಕ್ಷಣೆಯಲ್ಲಿ ತೊಡಗಿವೆ. ಯೂನಿಯನ್ ಕಾರ್ಬೈಡ್ ಕಂಪೆನಿಯ ಮುಖ್ಯ ಕಾರ್ಯನಿರ್ವಹಣಾಧಿಕಾರಿ ವಾರ್ನ್ ಆ್ಯಂಡರ್ಸನ್ ಭಾರತದಲ್ಲಿ ಯಾವುದೇ ವಿಚಾರಣೆ ಎದುರಿಸದಿರುವುದೇ ಇದಕ್ಕೆ ನಿದರ್ಶನ ಎಂದು ಅವರು ದೂರಿದರು.