೨೦೦೨ರ ಗೋಧ್ರಾ ಗಲಭೆಯ ಹಿನ್ನೆಲೆಯಲ್ಲಿ ಮೋದಿ ಸರ್ಕಾರವನ್ನು ಬೆಂಬಲಿಸುವುದಿಲ್ಲ, ಜಾತ್ಯತೀತ ಸರ್ಕಾರಕ್ಕೆ ಮಾತ್ರ ನಮ್ಮ ಬೆಂಬಲವಿದೆ ಎಂದು ಡಿಎಂಕೆ ವಕ್ತಾರ ಟಿಕೆಎಸ್ ಇಳಂಗೋವನ್ ತಿಳಿಸಿದರು.
ಈ ನಡುವೆ ಕಾಂಗ್ರೆಸ್ ನಾಯಕ ರಷೀದ್ ಆಳ್ವಿ ಮಾತನಾಡಿ, ಬಿಜೆಪಿಯನ್ನು ಅಧಿಕಾರದಿಂದ ದೂರ ಇಡಲು ಟಿಎಂಸಿ ನೇತೃತ್ವದಲ್ಲಿ ಎಲ್ಲ ಪ್ರಾದೇಶಿಕ ಜಾತ್ಯತೀತ ಪಕ್ಷಗಳು ಒಂದಾಗಬೇಕು ಎಂದು ಕರೆ ನೀಡಿದ್ದಾರೆ.