ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಂಸತ್ತಿನಲ್ಲಿ ಶ್ರದ್ಧಾಂಜಲಿ

Last Updated 21 ಫೆಬ್ರುವರಿ 2011, 17:35 IST
ಅಕ್ಷರ ಗಾತ್ರ

ನವದೆಹಲಿ (ಪಿಟಿಐ): ಇತ್ತೀಚೆಗೆ ನಿಧನರಾದ ಖ್ಯಾತ ಹಿಂದೂಸ್ತಾನಿ ಗಾಯಕ ಪಂಡಿತ ಭೀಮಸೇನ್ ಜೋಷಿ, ಕೇರಳದ ಮಾಜಿ ಮುಖ್ಯಮಂತ್ರಿ ಕೆ.ಕರುಣಾಕರನ್ ಮತ್ತು ಶಬರಿಮಲೆ ಯಾತ್ರೆಯಿಂದ ಮರಳುವಾಗ ಕಾಲ್ತುಳಿತಕ್ಕೆ ಸಿಕ್ಕಿ ಸತ್ತ ನೂರಾರು ಮಂದಿಯ ಆತ್ಮಕ್ಕೆ ಶಾಂತಿ ಕೋರಿ ಲೋಕಸಭೆಯಲ್ಲಿ ಶೃದ್ಧಾಂಜಲಿ ಸಲ್ಲಿಸಲಾಯಿತು. ರಾಷ್ಟ್ರಪತಿ ಅವರು ಜಂಟಿ ಸದನವನ್ನು ಉದ್ದೇಶಿಸಿ ಭಾಷಣ ಮಾಡಿದ ನಂತರ ಸಭೆ ಸೇರಿದಾಗ ಲೋಕಸಭಾಧ್ಯಕ್ಷೆ ಮೀರಾ ಕುಮಾರ್, ಅಗಲಿದ ಲೋಕಸಭೆಯ ಮಾಜಿ ಅಧ್ಯಕ್ಷ ಬಲಿರಾಂ ಭಗತ್, ಮಾಜಿ ಸಂಸದರಾದ ಲಟ್‌ಪಟ್ ಅಲಿ ಖಾನ್, ಪ್ರಭಾವತಿ ಗುಪ್ತ, ಟಿ. ಎಸ್. ಶೃಂಗಾರೆ, ಕರುಣಾಕರನ್, ಭೀಮಸೇನ್ ಜೋಷಿ ಅವರಿಗೆ ಶ್ರದ್ಧಾಂಜಲಿ ಅರ್ಪಿಸುವ ಗೊತ್ತುವಳಿ ಮಂಡಿಸಿದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT