ನವದೆಹಲಿ (ಐಎಎನ್ಎಸ್): ಸಂಸತ್ನ ಉಭಯ ಸದನಗಳನ್ನು ಬುಧವಾರ ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು. ಲೋಕಪಾಲ ಮಸೂದೆ ಅಂಗೀಕಾರಗೊಂಡ ತಕ್ಷಣವೇ ಲೋಕಸಭೆ ಕಲಾಪವನ್ನು ಅನಿರ್ದಿಷ್ಟಾವಧಿಗೆ ಮುಂದೂಡಲಾಯಿತು.
ಲೇಖಾನುದಾನ ಅನುಮೋದನೆಗಾಗಿ ಹೊಸವರ್ಷದಲ್ಲಿ ಮತ್ತೆ ಕಲಾಪ ನಡೆಯುವ ಸಾಧ್ಯತೆ ಇದೆ.
‘ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಬಜೆಟ್ ಅಧಿವೇಶನದ ಬದಲು ಲೇಖಾನುದಾನಕ್ಕೆ ಅನುಮೋದನೆ ಪಡೆದುಕೊಳ್ಳಲಾಗುತ್ತದೆ’ ಎಂದು ಸಂಸದೀಯ ವ್ಯವಹಾರಗಳ ಸಚಿವ ಕಮಲ್ ನಾಥ್ ಹೇಳಿದ್ದಾರೆ.
ರಾಜ್ಯಸಭೆ: ಭಾರತದ ರಾಜತಾಂತ್ರಿಕ ಅಧಿಕಾರಿ ದೇವಯಾನಿ ಖೋಬ್ರಾಗಡೆ ಅವರ ಬಂಧನದ ಬಗ್ಗೆ ರಾಜ್ಯಸಭೆಯಲ್ಲಿ ಚರ್ಚೆ ನಡೆಯಿತು. ಭಾರತ–ಬಾಂಗ್ಲಾ ಭೂ ವಿನಿಮಯಕ್ಕೆ ಸಂಬಂಧಿಸಿದ ಸಂವಿಧಾನ ತಿದ್ದುಪಡಿ ಮಸೂದೆ ಮಂಡನೆಗೆ ಸರ್ಕಾರ ಪ್ರಯತ್ನಿಸಿತು. ಈ ಸಂದರ್ಭದಲ್ಲಿ ಗದ್ದಲ ನಡೆಯಿತು.