ಹತ್ತೊಂಬತ್ತು ಮಂದಿ ಶಾಸಕರು ಶಾಸಕಾಂಗ ಪಕ್ಷದ ಸಭೆ ಕರೆಯಬೇಕೆಂದು ಆಗ್ರಹಿಸಿ ಪತ್ರ ನೀಡಿರುವುದು ನಿಜ. ಪಕ್ಷದ ರಾಷ್ಟ್ರೀಯ ಅಧ್ಯಕ್ಷರಿಗೆ ಕಾಲಕಾಲಕ್ಕೆ ಇಲ್ಲಿನ ಬೆಳವಣಿಗೆಗಳನ್ನು ವರದಿ ಮಾಡುವುದು ನನ್ನ ಕರ್ತವ್ಯ. ಅದನ್ನು ನಾನು ನೆರವೇರಿಸಿದ್ದೇನೆ. ಅದಕ್ಕೆ ಸಂಬಂಧಿಸಿದಂತೆ ಶಾಸಕಾಂಗ ಪಕ್ಷದ ಸಭೆ ಕರೆದು ಚರ್ಚಿಸುವ ಅಗತ್ಯವೇನೂ ಇಲ್ಲ ಎಂದು ಅವರು ಅಭಿಪ್ರಾಯಪಟ್ಟರು.