ಬೆಂಗಳೂರು: ಸಕಾಲ ಯೋಜನೆಯಡಿ ಅರ್ಜಿಗಳ ಸ್ವೀಕಾರ ಮತ್ತು ವಿಲೇವಾರಿಯಲ್ಲಿ ಚಿಕ್ಕಬಳ್ಳಾಪುರ ಜಿಲ್ಲೆ ಸತತ ಮೂರನೇ ತಿಂಗಳು ಮೊದಲ ಸ್ಥಾನದಲ್ಲಿ ಮುಂದು ವರಿದಿದೆ.
ನವೆಂಬರ್ ತಿಂಗಳಿನಲ್ಲಿ ಸಕಾಲ ಅನುಷ್ಠಾನದಲ್ಲಿ ಉತ್ತರ ಕನ್ನಡ ಮತ್ತು ರಾಮನಗರ ಜಿಲ್ಲೆಗಳು ಎರಡು ಹಾಗೂ ಮೂರನೇ ಸ್ಥಾನದಲ್ಲಿವೆ. ಬೀದರ್ ಕೊನೆಯ ಸ್ಥಾನ ದಲ್ಲಿದ್ದರೆ, ಯಾದಗಿರಿ 29ನೇ ಮತ್ತು ಬಳ್ಳಾರಿ ಜಿಲ್ಲೆಗಳು 28ನೇ ಸ್ಥಾನ ದಲ್ಲಿವೆ.
ಸತತ ಮೂರನೇ ತಿಂಗಳು ಮೊದಲ ಸ್ಥಾನದಲ್ಲಿ ಮುಂದುವರಿದಿರುವುದಕ್ಕಾಗಿ ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಆರ್.ವಿಶಾಲ್ ಅವರನ್ನು ಕಾನೂನು ಸಚಿವ ಟಿ.ಬಿ. ಜಯಚಂದ್ರ ಅವರು ಬುಧವಾರ ವಿಧಾನಸೌಧದ ಸಮ್ಮೇಳನ ಸಭಾಂಗಣದಲ್ಲಿ ನಡೆದ ಕಾರ್ಯ ಕ್ರಮದಲ್ಲಿ ಅಭಿನಂದಿಸಿದರು.
ಸಕಾಲ ಯೋಜನೆಯ ಅನುಷ್ಠಾನಕ್ಕೆ ಗಣನೀಯ ಕೊಡುಗೆ ನೀಡಿರುವ ಸರ್ಕಾರಿ ನೌಕರರಿಗೆ ಸರ್ವೋತ್ತಮ ಪ್ರಶಸ್ತಿ ನೀಡಲಾಗುವುದು ಎಂದು ಅವರು ಹೇಳಿದರು.