ಬೆಂಗಳೂರು: ಸಕಾಲ ವೆಬ್ಸೈಟ್ ಮೂಲಕ ಅರ್ಜಿ ಹಾಗೂ ದೂರುಗಳ ವಿಲೇವಾರಿಗೆ ಜಿಲ್ಲಾಧಿಕಾರಿಗಳಿಗೂ ಅವಕಾಶ ನೀಡಲು ಸರ್ಕಾರ ನಿರ್ಧರಿಸಿದೆ. ಮುಖ್ಯಮಂತ್ರಿಯವರ ಸಚಿವಾಲಯದ ನೇರ ಉಸ್ತುವಾರಿಯಲ್ಲಿ ಈ ವೆಬ್ಸೈಟ್ ಮೂಲಕ ಅರ್ಜಿ, ದೂರುಗಳ ವಿಲೇವಾರಿ ನಡೆಯಲಿದೆ.
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ವಿ.ಉಮೇಶ್ ನೇತೃತ್ವದಲ್ಲಿ ಸೋಮವಾರ ವಿಧಾನಸೌಧದಲ್ಲಿ ನಡೆದ ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯಲ್ಲಿ ಸಿಬ್ಬಂದಿ ಮತ್ತು ಆಡಳಿತ ಸುಧಾರಣಾ ಇಲಾಖೆ ಪ್ರಧಾನ ಕಾರ್ಯದರ್ಶಿ ಶಾಲಿನಿ ರಜನೀಶ್ ಈ ವಿಷಯ ತಿಳಿಸಿದರು.
ಸಕಾಲಕ್ಕೆ ಸಂಬಂಧಿಸಿದ ದೂರುಗಳ ವಿಲೇವಾರಿಗಾಗಿ www.sakala.kar.nic.in ಎಂಬ ವೆಬ್ಸೈಟ್ ರೂಪಿಸಲಾಗಿದೆ. ಮುಖ್ಯಮಂತ್ರಿಯವರ ಜನತಾದರ್ಶನದಲ್ಲಿ ಸಲ್ಲಿಕೆಯಾಗುವ ಅರ್ಜಿಗಳ ವಿಲೇವಾರಿಗೂ ವೆಬ್ಸೈಟ್ ಬಳಸಿಕೊಳ್ಳಲು ನಿರ್ಧರಿಸಲಾಗಿದೆ.
ಮುಖ್ಯಮಂತ್ರಿ ಅವರು ಜಿಲ್ಲಾ ಉಸ್ತುವಾರಿ ಕಾರ್ಯದರ್ಶಿಗಳ ಸಭೆಯನ್ನು ನಿಗದಿ ಮಾಡಿದ್ದರು.