ಬೆಂಗಳೂರು: ಬೆಂಗಳೂರು ನಗರ ಜಿಲ್ಲಾಧಿಕಾರಿಗಳ ಕಚೇರಿ ಹಾಗೂ ತಾಲ್ಲೂಕು ಕಚೇರಿಗಳಲ್ಲಿ ಸಕಾಲ ಸಹಾಯ ಕೇಂದ್ರಗಳ ನಿರ್ವಹಣೆಗೆ ಅರ್ಹ ಅಭ್ಯರ್ಥಿಗಳಿಂದ ಅರ್ಜಿ ಆಹ್ವಾನಿಸಲಾಗಿದೆ. ಕನಿಷ್ಠ ಪದವಿ ವಿದ್ಯಾರ್ಹತೆಯೊಂದಿಗೆ ಕಂಪ್ಯೂಟರ್ ಜ್ಞಾನ ಇರುವ ಲ್ಯಾಪ್ಟಾಪ್, ಡಾಟಾ ಕಾರ್ಡ್, ಪ್ರಿಂಟರ್ ಮತ್ತು ಸ್ಕ್ಯಾನರ್ಗಳನ್ನು ಹೊಂದಿರುವ ಅಭ್ಯರ್ಥಿಗಳು ಅರ್ಜಿ ಸಲ್ಲಿಸಬಹುದು. ಮಾಹಿತಿಗೆ ಜಿಲ್ಲಾ ಮಾಹಿತಿ ತಂತ್ರಜ್ಞಾನ ಸಮಾಲೋಚಕರನ್ನು ಸಂಪರ್ಕಿಸಬಹುದು.