ಚೆಸ್ಟರ್ ಲೀ ಸ್ಟ್ರೀಟ್ (ಪಿಟಿಐ): ಭಾರತ ಕ್ರಿಕೆಟ್ ತಂಡದ ಗಾಯದ ಸಮಸ್ಯೆಯ ಸರಪಳಿಗೆ ಮತ್ತೊಂದು ಕೊಂಡಿ ಸೇರಿಕೊಂಡಿದೆ. ಚಾಂಪಿಯನ್ ಬ್ಯಾಟ್ಸ್ಮನ್ ಸಚಿನ್ ತೆಂಡೂಲ್ಕರ್ ಕಾಲ್ಬೆರಳು ನೋವಿಗೆ ಒಳಗಾಗಿದ್ದಾರೆ. ಹಾಗಾಗಿ ಅವರು ಇಂಗ್ಲೆಂಡ್ ವಿರುದ್ಧದ ಏಕದಿನ ಸರಣಿಯ ಮೊದಲ ಪಂದ್ಯಕ್ಕೆ ಲಭ್ಯರಾಗಲಿಲ್ಲ.
ಕೆಲದಿನಗಳಿಂದ ಸಚಿನ್ಗೆ ಈ ಸಮಸ್ಯೆ ಕಾಡುತಿತ್ತು. ಆದರೆ ಶುಕ್ರವಾರ ಅಭ್ಯಾಸದ ವೇಳೆ ಅದು ಮತ್ತಷ್ಟು ಜೋರಾಗಿದೆ. ಈ ಕಾರಣ ಅವರು ವೈದ್ಯರನ್ನು ಭೇಟಿಯಾಗಲಿದ್ದಾರೆ. ಬಳಿಕ ಸರಣಿಯ ಮುಂದಿನ ಪಂದ್ಯಗಳಿಗೆ ತೆಂಡೂಲ್ಕರ್ ಲಭ್ಯತೆ ಬಗ್ಗೆ ಸ್ಪಷ್ಟ ಮಾಹಿತಿ ಸಿಗಲಿದೆ.
ಈಗಾಗಲೇ ವೀರೇಂದ್ರ ಸೆಹ್ವಾಗ್, ಗೌತಮ್ ಗಂಭೀರ್, ಯುವರಾಜ್ ಸಿಂಗ್, ಜಹೀರ್ ಖಾನ್ ಹಾಗೂ ಇಶಾಂತ್ ಶರ್ಮ ಅವರು ಗಾಯದ ಕಾರಣ ಅಲಭ್ಯರಾಗಿದ್ದಾರೆ.