ಗುರುವಾರ, 18 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಖುರ್ಷಿದ್ ರಾಜೀನಾಮೆ ಇಲ್ಲ

Last Updated 15 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ನವದೆಹಲಿ/ ಲಖನೌ(ಪಿಟಿಐ): ಸ್ವಯಂಸೇವಾ ಸಂಸ್ಥೆಯ ಹಣ ದುರುಪಯೋಗದ ಆರೋಪ ಎದು ರಿಸುತ್ತಿರುವ ಕೇಂದ್ರ ಕಾನೂನು ಸಚಿವ ಸಲ್ಮಾನ್ ಖುರ್ಷಿದ್ ಅವರಿಂದ ರಾಜೀನಾಮೆ ಪಡೆಯುವ ಸಾಧ್ಯತೆಯನ್ನು ಕೇಂದ್ರ ಸರ್ಕಾರ ಹಾಗೂ ಕಾಂಗ್ರೆಸ್ ಪಕ್ಷ ತಳ್ಳಿ ಹಾಕಿವೆ.

`ಈ ಪ್ರಕರಣ ಕುರಿತಂತೆ ಸಚಿವರ ರಾಜೀನಾಮೆ ಕೇಳುವ ಪ್ರಶ್ನೆಯೇ ಇಲ್ಲ~ ಎಂದು ಹೇಳುವ ಮೂಲಕ ಕೇಂದ್ರ ಸಚಿವರಾದ ಅಂಬಿಕಾ ಸೋನಿ ಮತ್ತು ಗುಲಾಂ ನಬಿ ಅಜಾದ್ ಅವರು ಸಚಿವರ ರಾಜೀನಾಮೆ ಸುತ್ತ ಎದ್ದಿದ್ದ ಊಹಾಪೋಹಗಳಿಗೆ ಸೋಮವಾರ ತೆರೆ ಎಳೆದಿದ್ದಾರೆ.

ಮಾಧ್ಯಮಕ್ಕೆ ಸಂಬಂಧಿಸಿದ ಸಚಿವರ ತಂಡದ ಸಭೆಯ ನಂತರ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, `ಸಂಪುಟದಿಂದ ಖುರ್ಷಿದ್ ಕೈಬಿಡುವ ಪ್ರಶ್ನೆಯೇ ಉದ್ಭವಿಸಿಲ್ಲ~ ಎಂದು ಸ್ಪಷ್ಟವಾಗಿ ಹೇಳಿದರು. ಇದೇ ಸಭೆಯಲ್ಲಿ ಭಾಗವಹಿಸಿದ್ದ ಸಚಿವ ಸಲ್ಮಾನ್ ಖುರ್ಷಿದ್ ಮಾತ್ರ ಸುದ್ದಿಗಾರರ ಪ್ರಶ್ನೆಗಳಿಗೆ ಉತ್ತರಿಸಲು ನಿರಾಕರಿಸಿದರು.

ದಾಖಲಾತಿ ಸಂಗ್ರಹ:
ಏತನ್ಮಧ್ಯೆ, ಉತ್ತರ ಪ್ರದೇಶ ಆರ್ಥಿಕ ಅಪರಾಧ ವಿಭಾಗದ ಪೊಲೀಸರು ಲಖನೌದಲ್ಲಿ  ವಿವಿಧ ಇಲಾಖೆಗಳಿಂದ ದಾಖಲೆ ಸಂಗ್ರಹಿಸಲು ಆರಂಭಿಸಿದ್ದಾರೆ.  
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT