ಗುರುವಾರ, 28 ಮಾರ್ಚ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವ ಸ್ಥಾನಕ್ಕೆ ಕತ್ತಿ ಅನರ್ಹ: ಪಾಪು

Last Updated 20 ಅಕ್ಟೋಬರ್ 2012, 19:30 IST
ಅಕ್ಷರ ಗಾತ್ರ

ಬೆಂಗಳೂರು:  `ಉತ್ತರ ಕರ್ನಾಟಕವನ್ನು ಪ್ರತ್ಯೇಕ ರಾಜ್ಯವನ್ನಾಗಿ ಮಾಡಬೇಕು ಎಂಬ ಅನರ್ಥಕಾರಿ ಹೇಳಿಕೆ ನೀಡಿರುವ ಸಚಿವ ಉಮೇಶ ಕತ್ತಿ ಆ ಸ್ಥಾನದಲ್ಲಿ ಕೂಡಲು ಅರ್ಹರಲ್ಲ~ ಎಂದು ಹಿರಿಯ ಪತ್ರಕರ್ತ ಡಾ. ಪಾಟೀಲ ಪುಟ್ಟಪ್ಪ ಆಕ್ರೋಶದಿಂದ ಹೇಳಿದರು.

ನಗರದಲ್ಲಿ ಶನಿವಾರ ನಡೆದ `ನಮ್ಮ ಮೆಟ್ರೊ~ ರೈಲು ಸಂಚಾರದ ಮೊದಲ ವಾರ್ಷಿಕೋತ್ಸವದಲ್ಲಿ ಪಾಲ್ಗೊಂಡಿದ್ದ ಅವರು ವರದಿಗಾರರ ಜೊತೆ ಮಾತನಾಡಿದರು.

`ಬೆಳಗಾವಿಯಲ್ಲಿ ಸುವರ್ಣ ಸೌಧ ಕಟ್ಟಿರುವುದು ರಾಜ್ಯವನ್ನು ಒಡೆಯಲು ಅಲ್ಲ. ಅದನ್ನು ಕಟ್ಟಲು ಬಳಸಿದ ದುಡ್ಡು ಅಖಂಡ ಕರ್ನಾಟಕದ ಜನರಿಗೆ ಸೇರಿದ್ದು. ಬಾಯಿಗೆ ಬಂದಂತೆ ಕಿರುಚುವ ಕತ್ತಿ ಇದನ್ನು ಅರ್ಥ ಮಾಡಿಕೊಳ್ಳಬೇಕು~ ಎನ್ನುವಾಗ ಅವರ ಮುಖದಲ್ಲಿ ಸಿಟ್ಟು ಎದ್ದು ಕಾಣುತ್ತಿತ್ತು. `ಇಂತಹ ಒಣ ಕಾರುಬಾರು ಮಾಡದೆ ಸುಮ್ಮನಿದ್ದರೆ ಕತ್ತಿಗೆ ಒಳಿತು. ಯಾವುದೇ ಕಾರಣಕ್ಕೂ ರಾಜ್ಯವನ್ನು ಒಡೆಯುವ ಮಾತಿಗೆ ಅವಕಾಶ ಇಲ್ಲ~ ಎಂದರು.

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT