ಗುರುವಾರ, 25 ಏಪ್ರಿಲ್ 2024
×
ADVERTISEMENT
ಈ ಕ್ಷಣ :
ADVERTISEMENT
ADVERTISEMENT

ಸಚಿವರಿಗೆ ಕಾದು ಸುಸ್ತಾದ ಸಂಘಟನೆಗಳು

Last Updated 15 ಫೆಬ್ರುವರಿ 2011, 18:30 IST
ಅಕ್ಷರ ಗಾತ್ರ

ರಾಯಚೂರು: ಒಳಗಡೆ ಅಧಿಕಾರಿಗಳ ಗದ್ದಲ... ಹೊರಗಡೆ ಸಂಘಟನೆಗಳ ಕೂಗಾಟ... ಘೋಷಣೆ... ಅಲ್ಲಿ ಸಚಿವರು ಅಭಿವೃದ್ಧಿ ಕಾರ್ಯಗಳ ಬಗ್ಗೆ ಅಧಿಕಾರಿಗಳ ಪ್ರಶ್ನಿಸಿ ತರಾಟೆಗೆ ತೆಗೆದುಕೊಂಡರೆ ಸಭಾಭವನದ ಹೊರಗಡೆ ಸಂಘಟನೆಗಳ ಸದಸ್ಯರು ಸರ್ಕಾರದ ನಿರ್ಲಕ್ಷ್ಯ ಧೋರಣೆ, ಬೇಡಿಕೆಗೆ ಸ್ಪಂದಿಸದೇ ಇರುವುದಕ್ಕೆ ಆಕ್ರೋಶ ವ್ಯಕ್ತಪಡಿಸಿ ಘೋಷಣೆ ಕೂಗಿದರು.

ಇಲ್ಲಿನ ಜಿಲ್ಲಾ ಪಂಚಾಯಿತಿ ಸಭಾಭವನದಲ್ಲಿ ಮಂಗಳವಾರ ಕೆ.ಡಿ.ಪಿ ಸಭೆ ಜಿಲ್ಲಾ ಉಸ್ತುವಾರಿ ಸಚಿವರಾದ ಬಿ. ಶ್ರೀರಾಮುಲು ಅಧ್ಯಕ್ಷತೆಯಲ್ಲಿ ನಡೆದ ಸಂದರ್ಭದಲ್ಲಿ ಕಾಣಿಸಿದ ದೃಶ್ಯಗಳಿವು.ಪ್ರತಿನಿತ್ಯ ಒಂದಿಲ್ಲೊಂದು ಬೇಡಿಕೆ ಈಡೇರಿಕೆಗೆ, ಸಮಸ್ಯೆಗಳ ಪರಿಹಾರಕ್ಕೆ ಜಿಲ್ಲಾಡಳಿತಕ್ಕೆ ಮನವಿ ಸಲ್ಲಿಸುತ್ತಲೇ ಬಂದ ಸಂಘಟನೆಗಳು ಜಿಲ್ಲಾ ಉಸ್ತುವಾರಿ ಸಚಿವರು ಕೆಡಿಪಿ ಸಭೆಯಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಾರೆಂಬ ಸುದ್ದಿ ತಿಳಿದು ಸಭೆ ನಡೆದ ಜಿಲ್ಲಾ ಪಂಚಾಯಿತಿ ಸಭಾಭವನದ ಎದುರು ಸಚಿವರಿಗಾಗಿ ಕಾದು ನಿಂತರು.

ಹನ್ನೊಂದು ಗಂಟೆಗೆ ಆಗಮಿಸಿ ಸಚಿವ ಬಿ. ಶ್ರೀರಾಮುಲು ಸಭೆ ಆರಂಭಿಸಿದರು. ಸಭೆ ಮಧ್ಯಾಹ್ನ 4ರವರೆಗೂ ನಡೆಯಿತು. ಅಲ್ಲಿಯವರೆಗೂ ವಿವಿಧ ಸಂಘಟನೆಗಳ ನೂರಾರು ಸದಸ್ಯರು, ಪದಾಧಿಕಾರಿಗಳು ತಮ್ಮ ಕಷ್ಟಗಳನ್ನು ಹೇಳಿಕೊಳ್ಳಲು ಸುಡುಬಿಸಿಲಿನಲ್ಲಿಯೇ ಕಾದಿರಬೇಕಾಯಿತು. ಕೆಡಿಪಿ ಸಭೆ  ಬಳಿಕ ಸಂಘಟನೆಗಳ ಪ್ರತಿನಿಧಿಗಳನ್ನು ಭೇಟಿ ಮಾಡಿದ ಸಚಿವರು  ಮನವಿ ಸ್ವೀಕರಿಸಿ ಭರವಸೆ ನೀಡಿ ನಡೆದರು.
 

ತಾಜಾ ಸುದ್ದಿಗಾಗಿ ಪ್ರಜಾವಾಣಿ ಟೆಲಿಗ್ರಾಂ ಚಾನೆಲ್ ಸೇರಿಕೊಳ್ಳಿ | ಪ್ರಜಾವಾಣಿ ಆ್ಯಪ್ ಇಲ್ಲಿದೆ: ಆಂಡ್ರಾಯ್ಡ್ | ಐಒಎಸ್ | ನಮ್ಮ ಫೇಸ್‌ಬುಕ್ ಪುಟ ಫಾಲೋ ಮಾಡಿ.

ADVERTISEMENT
ADVERTISEMENT
ADVERTISEMENT
ADVERTISEMENT
ADVERTISEMENT